ಬ್ರೇಕಿಂಗ್ ನ್ಯೂಸ್
30-11-21 07:00 pm HK Desk news ಕ್ರೈಂ
Photo credits : Headline Karnataka
ಮಂಗಳೂರು, ನ.30: ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬ ಪಂಚಾಯತ್ ಅಧ್ಯಕ್ಷರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಕಂದಾವರ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.
ಕೈಕಂಬ ಬಳಿಯ ಕಂದಾವರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಉಮೇಶ್ ಮೂಲ್ಯ ಇಂದು ಮಧ್ಯಾಹ್ನ ಪಿಡಿಓ ಯಶವಂತ ಕಚೇರಿಗೆ ತೆರಳಿ, ಪಂಚಾಯತ್ ನಿರ್ಣಯ ಪುಸ್ತಕವನ್ನು ಕೇಳಿದ್ದಾರೆ. ಆದರೆ, ಪಿಡಿಓ ಅಧಿಕಾರಿ ಪುಸ್ತಕವನ್ನು ನೀಡಲು ನಿರಾಕರಿಸಿದ್ದಾರೆ. ಅದಕ್ಕೆ ನಮಗೆ ಪಂಚಾಯತ್ ನಿರ್ಣಯ ಪುಸ್ತಕವನ್ನು ಪಡೆಯುವುದಕ್ಕೂ ಅಧಿಕಾರ ಇಲ್ಲವೇ ಎಂದು ಪಂಚಾಯತ್ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಪಿಡಿಓ ಯಶವಂತ್, ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯರನ್ನು ದೂಡಿ ಹಾಕಿದ್ದು ಮುಖಕ್ಕೆ ಗುದ್ದಿದ್ದಾರೆ ಎನ್ನಲಾಗಿದೆ. ಇದರ ಪೆಟ್ಟಿಗೆ ಉಮೇಶ್ ಮೂಲ್ಯ ನೆಲಕ್ಕೆ ಬಿದ್ದಿದ್ದು, ಗಲ್ಲಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪಂಚಾಯತ್ ಸದಸ್ಯರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪಿಡಿಓ ಯಶವಂತ್ ಹಿಂದಿನಿಂದಲೂ ಸಾರ್ವಜನಿಕರು ಮತ್ತು ಪಂಚಾಯತ್ ಸದಸ್ಯರ ಜೊತೆ ದುರ್ವರ್ತನೆ ತೋರುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಪಂಚಾಯತ್ ನಲ್ಲಿ ಯಾವುದೇ ವಿಚಾರದ ಬಗ್ಗೆ ಮಾಹಿತಿ ಕೇಳಿದರೂ, ಆತ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಈ ಬಗ್ಗೆ ಇತ್ತೀಚೆಗೆ ಕೆಲವು ಪಂಚಾಯತ್ ಸದಸ್ಯರು ಸೇರಿ ಜಿಲ್ಲಾ ಪಂಚಾಯತ್ ಸಿಇಓಗೆ ದೂರು ನೀಡಿದ್ದರು. ಒಂದು ವರ್ಷದ ಹಿಂದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಫೋನ್ ಮಾಡಿದ್ದಾಗ, ಪಿಡಿಓ ಯಶವಂತ್ ಉಲ್ಟಾ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಇದೀಗ ಬಿಜೆಪಿ ಆಡಳಿತದ ಪಂಚಾಯತ್ ಅಧ್ಯಕ್ಷರಿಗೆ ಹಲ್ಲೆ ನಡೆಸಿ ಪಿಡಿಓ ಮತ್ತೆ ಸುದ್ದಿಯಾಗಿದ್ದಾರೆ.
Mnagalore Kandavara panchayat President assaulted by PDO in office. President Umesh when asked of a record book from Pdo Yashwant. Pdo who refused to give the book started to fight and that landed to assault.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm