ಬ್ರೇಕಿಂಗ್ ನ್ಯೂಸ್
30-11-21 07:00 pm HK Desk news ಕ್ರೈಂ
Photo credits : Headline Karnataka
ಮಂಗಳೂರು, ನ.30: ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬ ಪಂಚಾಯತ್ ಅಧ್ಯಕ್ಷರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಕಂದಾವರ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.
ಕೈಕಂಬ ಬಳಿಯ ಕಂದಾವರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಉಮೇಶ್ ಮೂಲ್ಯ ಇಂದು ಮಧ್ಯಾಹ್ನ ಪಿಡಿಓ ಯಶವಂತ ಕಚೇರಿಗೆ ತೆರಳಿ, ಪಂಚಾಯತ್ ನಿರ್ಣಯ ಪುಸ್ತಕವನ್ನು ಕೇಳಿದ್ದಾರೆ. ಆದರೆ, ಪಿಡಿಓ ಅಧಿಕಾರಿ ಪುಸ್ತಕವನ್ನು ನೀಡಲು ನಿರಾಕರಿಸಿದ್ದಾರೆ. ಅದಕ್ಕೆ ನಮಗೆ ಪಂಚಾಯತ್ ನಿರ್ಣಯ ಪುಸ್ತಕವನ್ನು ಪಡೆಯುವುದಕ್ಕೂ ಅಧಿಕಾರ ಇಲ್ಲವೇ ಎಂದು ಪಂಚಾಯತ್ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಪಿಡಿಓ ಯಶವಂತ್, ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯರನ್ನು ದೂಡಿ ಹಾಕಿದ್ದು ಮುಖಕ್ಕೆ ಗುದ್ದಿದ್ದಾರೆ ಎನ್ನಲಾಗಿದೆ. ಇದರ ಪೆಟ್ಟಿಗೆ ಉಮೇಶ್ ಮೂಲ್ಯ ನೆಲಕ್ಕೆ ಬಿದ್ದಿದ್ದು, ಗಲ್ಲಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪಂಚಾಯತ್ ಸದಸ್ಯರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪಿಡಿಓ ಯಶವಂತ್ ಹಿಂದಿನಿಂದಲೂ ಸಾರ್ವಜನಿಕರು ಮತ್ತು ಪಂಚಾಯತ್ ಸದಸ್ಯರ ಜೊತೆ ದುರ್ವರ್ತನೆ ತೋರುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಪಂಚಾಯತ್ ನಲ್ಲಿ ಯಾವುದೇ ವಿಚಾರದ ಬಗ್ಗೆ ಮಾಹಿತಿ ಕೇಳಿದರೂ, ಆತ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಈ ಬಗ್ಗೆ ಇತ್ತೀಚೆಗೆ ಕೆಲವು ಪಂಚಾಯತ್ ಸದಸ್ಯರು ಸೇರಿ ಜಿಲ್ಲಾ ಪಂಚಾಯತ್ ಸಿಇಓಗೆ ದೂರು ನೀಡಿದ್ದರು. ಒಂದು ವರ್ಷದ ಹಿಂದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಫೋನ್ ಮಾಡಿದ್ದಾಗ, ಪಿಡಿಓ ಯಶವಂತ್ ಉಲ್ಟಾ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಇದೀಗ ಬಿಜೆಪಿ ಆಡಳಿತದ ಪಂಚಾಯತ್ ಅಧ್ಯಕ್ಷರಿಗೆ ಹಲ್ಲೆ ನಡೆಸಿ ಪಿಡಿಓ ಮತ್ತೆ ಸುದ್ದಿಯಾಗಿದ್ದಾರೆ.
Mnagalore Kandavara panchayat President assaulted by PDO in office. President Umesh when asked of a record book from Pdo Yashwant. Pdo who refused to give the book started to fight and that landed to assault.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm