ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm