ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm