ಬ್ರೇಕಿಂಗ್ ನ್ಯೂಸ್
02-12-21 10:58 pm Mangaluru Correspondent ಕ್ರೈಂ
ಮಂಗಳೂರು, ಡಿ.2: ಬಜ್ಪೆ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಅಂತಾರಾಜ್ಯ ಮಟ್ಟದಲ್ಲಿ ಕುಖ್ಯಾತಿ ಗಳಿಸಿರುವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
2020ರ ಮೇ ತಿಂಗಳಲ್ಲಿ ಅಡ್ಡೂರು ಗ್ರಾಮದ ಪಲ್ಲಂಗಡಿ ಎಂಬಲ್ಲಿ ಅಹ್ಮದ್ ಬಾವ ಎಂಬವರ ಮನೆಯ ಕಿಟಕಿ ಮುರಿದು ಕಳ್ಳರು ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಬ್ಬಾಸ್, ಇಬ್ರಾಹಿಂ, ನಜೀರ್ ಇತ್ಯಾದಿ ಹೆಸರುಗಳಲ್ಲಿ ಕರೆಸಿಕೊಂಡಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಯಪದವು ನಿವಾಸಿ ಅಬ್ಬಾಸ್ ನನ್ನು ಬಂಧಿಸಿದ್ದಾರೆ.
ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಅಬ್ಬಾಸ್, ಕಳೆದ ಒಂದೂವರೆ ವರ್ಷದಲ್ಲಿ ಬೆಳ್ತಂಗಡಿ, ಕಡಬ. ರಾಮಕುಂಜ, ಪುತ್ತೂರು, ಉಳ್ಳಾಲ ಹೀಗೆ ಹಲವು ಕಡೆಗಳಲ್ಲಿ ವಾಸವಿದ್ದು, ವಾಸವನ್ನು ಬದಲಾಯಿಸುತ್ತಾ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಬ್ಬಾಸ್ ವಿರುದ್ಧ ಕೊಣಾಜೆ, ಉಳ್ಳಾಲ, ಬೆಳ್ತಂಗಡಿ, ಕಾಸರಗೋಡು ಜಿಲ್ಲೆಯ ಕುಂಬಳೆ, ಮಂಜೇಶ್ವರ ಠಾಣೆಗಳಲ್ಲಿ ಮನೆ ಕಳ್ಳತನ, ಗ್ಯಾಸ್ ಸಿಲಿಂಡರ್ ಕಳವು, ಬೈಕ್ ಕಳವು, ಬೀಟೆ ಮರ ಕಳ್ಳತನ ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ವಿಚಾರಣೆ ವೇಳೆ ಗಂಜಿಮಠದಲ್ಲಿ ಜೆಸಿಂತಾ ಎಂಬವರ ಡಿಕುನ್ನ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಕಳವಿಗೆ ಯತ್ನಿಸಿರುವ ಬಗ್ಗೆ ತಿಳಿಸಿದ್ದಾನೆ. ಬಜ್ಪೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Interstate Robber Arrested by Bajpe Police in Mangalore. The arrested has been identified as Abbas.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am