ಬ್ರೇಕಿಂಗ್ ನ್ಯೂಸ್
02-12-21 10:58 pm Mangaluru Correspondent ಕ್ರೈಂ
ಮಂಗಳೂರು, ಡಿ.2: ಬಜ್ಪೆ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಅಂತಾರಾಜ್ಯ ಮಟ್ಟದಲ್ಲಿ ಕುಖ್ಯಾತಿ ಗಳಿಸಿರುವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
2020ರ ಮೇ ತಿಂಗಳಲ್ಲಿ ಅಡ್ಡೂರು ಗ್ರಾಮದ ಪಲ್ಲಂಗಡಿ ಎಂಬಲ್ಲಿ ಅಹ್ಮದ್ ಬಾವ ಎಂಬವರ ಮನೆಯ ಕಿಟಕಿ ಮುರಿದು ಕಳ್ಳರು ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಬ್ಬಾಸ್, ಇಬ್ರಾಹಿಂ, ನಜೀರ್ ಇತ್ಯಾದಿ ಹೆಸರುಗಳಲ್ಲಿ ಕರೆಸಿಕೊಂಡಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಯಪದವು ನಿವಾಸಿ ಅಬ್ಬಾಸ್ ನನ್ನು ಬಂಧಿಸಿದ್ದಾರೆ.
ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಅಬ್ಬಾಸ್, ಕಳೆದ ಒಂದೂವರೆ ವರ್ಷದಲ್ಲಿ ಬೆಳ್ತಂಗಡಿ, ಕಡಬ. ರಾಮಕುಂಜ, ಪುತ್ತೂರು, ಉಳ್ಳಾಲ ಹೀಗೆ ಹಲವು ಕಡೆಗಳಲ್ಲಿ ವಾಸವಿದ್ದು, ವಾಸವನ್ನು ಬದಲಾಯಿಸುತ್ತಾ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಬ್ಬಾಸ್ ವಿರುದ್ಧ ಕೊಣಾಜೆ, ಉಳ್ಳಾಲ, ಬೆಳ್ತಂಗಡಿ, ಕಾಸರಗೋಡು ಜಿಲ್ಲೆಯ ಕುಂಬಳೆ, ಮಂಜೇಶ್ವರ ಠಾಣೆಗಳಲ್ಲಿ ಮನೆ ಕಳ್ಳತನ, ಗ್ಯಾಸ್ ಸಿಲಿಂಡರ್ ಕಳವು, ಬೈಕ್ ಕಳವು, ಬೀಟೆ ಮರ ಕಳ್ಳತನ ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ವಿಚಾರಣೆ ವೇಳೆ ಗಂಜಿಮಠದಲ್ಲಿ ಜೆಸಿಂತಾ ಎಂಬವರ ಡಿಕುನ್ನ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಕಳವಿಗೆ ಯತ್ನಿಸಿರುವ ಬಗ್ಗೆ ತಿಳಿಸಿದ್ದಾನೆ. ಬಜ್ಪೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Interstate Robber Arrested by Bajpe Police in Mangalore. The arrested has been identified as Abbas.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm