ಬ್ರೇಕಿಂಗ್ ನ್ಯೂಸ್
02-12-21 10:58 pm Mangaluru Correspondent ಕ್ರೈಂ
ಮಂಗಳೂರು, ಡಿ.2: ಬಜ್ಪೆ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಅಂತಾರಾಜ್ಯ ಮಟ್ಟದಲ್ಲಿ ಕುಖ್ಯಾತಿ ಗಳಿಸಿರುವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
2020ರ ಮೇ ತಿಂಗಳಲ್ಲಿ ಅಡ್ಡೂರು ಗ್ರಾಮದ ಪಲ್ಲಂಗಡಿ ಎಂಬಲ್ಲಿ ಅಹ್ಮದ್ ಬಾವ ಎಂಬವರ ಮನೆಯ ಕಿಟಕಿ ಮುರಿದು ಕಳ್ಳರು ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಬ್ಬಾಸ್, ಇಬ್ರಾಹಿಂ, ನಜೀರ್ ಇತ್ಯಾದಿ ಹೆಸರುಗಳಲ್ಲಿ ಕರೆಸಿಕೊಂಡಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಯಪದವು ನಿವಾಸಿ ಅಬ್ಬಾಸ್ ನನ್ನು ಬಂಧಿಸಿದ್ದಾರೆ.
ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಅಬ್ಬಾಸ್, ಕಳೆದ ಒಂದೂವರೆ ವರ್ಷದಲ್ಲಿ ಬೆಳ್ತಂಗಡಿ, ಕಡಬ. ರಾಮಕುಂಜ, ಪುತ್ತೂರು, ಉಳ್ಳಾಲ ಹೀಗೆ ಹಲವು ಕಡೆಗಳಲ್ಲಿ ವಾಸವಿದ್ದು, ವಾಸವನ್ನು ಬದಲಾಯಿಸುತ್ತಾ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಬ್ಬಾಸ್ ವಿರುದ್ಧ ಕೊಣಾಜೆ, ಉಳ್ಳಾಲ, ಬೆಳ್ತಂಗಡಿ, ಕಾಸರಗೋಡು ಜಿಲ್ಲೆಯ ಕುಂಬಳೆ, ಮಂಜೇಶ್ವರ ಠಾಣೆಗಳಲ್ಲಿ ಮನೆ ಕಳ್ಳತನ, ಗ್ಯಾಸ್ ಸಿಲಿಂಡರ್ ಕಳವು, ಬೈಕ್ ಕಳವು, ಬೀಟೆ ಮರ ಕಳ್ಳತನ ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ವಿಚಾರಣೆ ವೇಳೆ ಗಂಜಿಮಠದಲ್ಲಿ ಜೆಸಿಂತಾ ಎಂಬವರ ಡಿಕುನ್ನ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಕಳವಿಗೆ ಯತ್ನಿಸಿರುವ ಬಗ್ಗೆ ತಿಳಿಸಿದ್ದಾನೆ. ಬಜ್ಪೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Interstate Robber Arrested by Bajpe Police in Mangalore. The arrested has been identified as Abbas.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am