ಬ್ರೇಕಿಂಗ್ ನ್ಯೂಸ್
03-12-21 09:27 am Mangaluru Correspondent ಕ್ರೈಂ
ಮಂಗಳೂರು, ಡಿ.3: ನಗರದ ಎರಡು ಕಡೆ ವಿದ್ಯಾರ್ಥಿಗಳ ನಡುವೆ ತೀವ್ರ ಗಲಾಟೆ ನಡೆದಿದ್ದು ಬಿಡಿಸಲು ಹೋದ ಐವರು ಪೊಲೀಸರಿಗೂ ಕಲ್ಲು, ಇಂಟರ್ ಲಾಕ್ ಎಸೆದು ಹಲ್ಲೆ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಯೇನಪೋಯ ಡಿಗ್ರಿ ಕಾಲೇಜಿನಲ್ಲಿ 3ನೇ ವರ್ಷದ ಬಿಎಸ್ಪಿ ಹಾಸ್ಪಿಟಾಲಿಟಿ ಓದುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ಎಂಬಾತ ಗುರುವಾರ ಸಂಜೆ ಏಳು ಗಂಟೆ ಸುಮಾರಿಗೆ ಬಾವುಟ ಗುಡ್ಡೆಯ ಲೈಟ್ ಹೌಸ್ ಹಿಲ್ ಅಪಾರ್ಟ್ಮೆಂಟ್ ಬಳಿ ಬಂದಿದ್ದು ಅಲ್ಲಿ ತನ್ನ ಸ್ನೇಹಿತೆ ಸಿನಾನ್ ಜೊತೆ ಮಾತನಾಡುತ್ತಿದ್ದಾಗ ಎಂಟು ಜನರ ತಂಡ ಆದರ್ಶ್ ಮೇಲೆ ಹಲ್ಲೆ ನಡೆಸಿದೆ. ಇಂಟರ್ ಲಾಕ್ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದು ತೀವ್ರ ಗಾಯಗೊಂಡ ಆದರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಬಗ್ಗೆ ಆದರ್ಶ್ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.
ಇದೇ ವೇಳೆ, ಇವರ ಜಗಳ ಬಿಡಿಸಲು ಬಂದಿದ್ದ ಆದರ್ಶ್ ಸ್ನೇಹಿತರಾದ ಶ್ರವಣ್ ಮತ್ತು ಶೆನಿನ್ ಬಂದಿದ್ದು ಅವರಿಗೂ ಹಲ್ಲೆ ನಡೆಸಲಾಗಿದೆ. ಅಲ್ಲದೆ, ಇವರ ಗಲಾಟೆಯಲ್ಲಿ ಎದುರಾಳಿ ತಂಡದ ಮಹಮ್ಮದ್ ಶರೀಫ್ ಎಂಬವನ ಮೇಲೂ ಹಲ್ಲೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಘಟನೆಗೆ ಸಂಬಂಧಿಸಿ ಎರಡೂ ತಂಡಕ್ಕೆ ಸೇರಿದ ಆದಿತ್ಯ, ಕೆನ್ ಜಾನ್ಸನ್, ಅಬ್ದುಲ್ ಶಾಹಿದ್, ಮೊಹಮ್ಮದ್, ವಿಮಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬಳಿಕ ದೂರುದಾರ ಆದರ್ಶ್, ತನ್ನ ಸ್ನೇಹಿತರಾದ ಗುಜ್ಜರಕೆರೆ ಬಳಿಯ ಹಾಸ್ಟೆಲ್ ನಲ್ಲಿ ನಿವಾಸಿಗಳಾಗಿರುವ ಶ್ರವಣ್ ಮತ್ತು ಶೆನಿನ್ ಜೀವಕ್ಕೆ ಅಪಾಯ ಇದ್ದು ರಕ್ಷಣೆಗಾಗಿ ಪೊಲೀಸರಿಗೆ ಮನವಿ ಮಾಡಿದ್ದು ಅದರಂತೆ ಪೊಲೀಸರು ಅಲ್ಲಿಗೆ ತೆರಳಿದಾಗ ಅಲ್ಲಿದ್ದ ವಿದ್ಯಾರ್ಥಿಗಳ ತಂಡ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಪಾಂಡೇಶ್ವರ ಪಿಎಸ್ಐ ಶೀತಲ್ ಮತ್ತವರ ತಂಡ ಸ್ಥಳಕ್ಕೆ ತೆರಳಿದ್ದಾಗ ಇಂಟರ್ ಲಾಕ್, ಕಲ್ಲು , ಕುರ್ಚಿಗಳನ್ನು ಎಸೆದು ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ. ಐದು ಜನ ಪೊಲೀಸರು ಗಾಯಗೊಂಡಿದ್ದಾರೆ.
ಈ ಬಗ್ಗೆ ಸಿನಾನ್ ಎಂಬಾತ ಪ್ರತಿ ದೂರು ನೀಡಿದ್ದು ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿ ಫಹಾದ್, ಅಬು ತಹರ್, ಮೊಹಮ್ಮದ್ ನಾಸಿಫ್, ಆದರ್ಶ ಎಂಬವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಇಸ್ಮಾಯಿಲ್, ಇಸ್ಮಾಯಿಲ್ ಅನ್ಸರ್, ಗಫೂರ್, ತಮಮ್, ಸಿನಾನ್ ಎಂಬವರು ಕೂಡ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
Two groups of students, residing in the hostel of a degree college of the city, clashed at Gujjarakere area of the city. Some personal issue is said to be the reason for the outburst. According to the details, Complainant Adarsh Premkumar (21), is student of 3rd year BSc (hospitality science) student in one of the colleges in the city.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm