ಬ್ರೇಕಿಂಗ್ ನ್ಯೂಸ್
03-12-21 02:42 pm HK Desk news ಕ್ರೈಂ
ಮಂಗಳೂರು, ಡಿ.3: ಮನೆಯ ಹೊರಭಾಗದಲ್ಲಿ ಕಟ್ಟಿಹಾಕಿದ್ದ ಮೂರು ದನಗಳನ್ನು ಮನೆಯವರಿಗೆ ತಲವಾರು ತೋರಿಸಿ, ಸ್ಕಾರ್ಪಿಯೋ ವಾಹನದಲ್ಲಿ ಹೊತ್ತೊಯ್ದ ಘಟನೆ ಕುಳೂರಿನಲ್ಲಿ ನಡೆದಿದ್ದು, ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಇತ್ತೀಚೆಗೆ ನಾಗನ ಕಲ್ಲಿಗೆ ಹಾನಿ ಘಟನೆ ನಡೆದಿದ್ದ ಪ್ರದೇಶದ ಕುಳೂರಿನ ಉಮೇಶ್ ಎಂಬವರ ಮನೆಯ ಆವರಣದಲ್ಲಿ ಘಟನೆ ನಡೆದಿದೆ. ಇಂದು ನಸುಕಿನ ಜಾವ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ನಾಲ್ಕು ಮಂದಿ ಸೇರಿ ಮನೆಯ ಹೊರಗೆ ಕಟ್ಟಿಹಾಕಿದ್ದ ದನಗಳನ್ನು ಸ್ಕಾರ್ಪಿಯೋ ವಾಹನದಲ್ಲಿ ತುಂಬಿಸುತ್ತಿದ್ದುದನ್ನು ಅದೇ ಪರಿಸರದ ಜನರು ನೋಡಿದ್ದಾರೆ. ಈ ಬಗ್ಗೆ ಮನೆಯವರಿಗೆ ತಿಳಿಸಿದ್ದು, ಬಳಿಕ ಸ್ಥಳೀಯರು ಬೊಬ್ಬೆ ಹಾಕುತ್ತಲೇ ಮೂರು ದನಗಳ ಜೊತೆ ಸ್ಕಾರ್ಪಿಯೋ ವಾಹನದಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಈ ಬಗ್ಗೆ ಉಮೇಶ್ ಮತ್ತು ಬಜರಂಗದಳ ಸಂಘಟನೆಯ ನಾಯಕರು ಕಾವೂರು ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಅಲ್ಲದೆ, ಬಜರಂಗದಳ ಸಂಘಟನೆಯ ಪ್ರಮುಖರು ಸದ್ರಿ ಪ್ರದೇಶಕ್ಕೆ ಭೇಟಿ ನೀಡಿದ್ದು, ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕೃತ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಕದ್ದೊಯ್ದ ಗೋವುಗಳನ್ನು ಪತ್ತೆಮಾಡಿ ಮತ್ತೆ ತಂದು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಸ್ಥಳೀಯ ಪರಿಸರದ ನಿವಾಸಿಗಳು ಮತ್ತು ಮಂಗಳೂರಿನ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಡಿ.4ರಂದು ಕಾವೂರು ಠಾಣೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ.
ಕಾವೂರು, ಪಂಜಿಮೊಗರು, ಕುಳೂರು ಪರಿಸರದಲ್ಲಿ ಕಳೆದ ಹಲವು ದಿನಗಳಲ್ಲಿ ಇದೇ ರೀತಿ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದೊಯ್ಯುವ ಕೃತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಸ್ಥಳೀಯರು ದೂರು ದಾಖಲಿಸಿಲ್ಲ. ಇಂದಿನ ಕೃತ್ಯ ಬಯಲಾಗುತ್ತಿದ್ದಂತೆ, ನಮ್ಮ ದನವನ್ನೂ ಇದೇ ರೀತಿ ಕದ್ದೊಯ್ದಿದ್ದಾರೆ ಎಂದು ಹಲವರು ಹೇಳತೊಡಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪರಿಸರದ ಜನರು ಆಕ್ರೋಶಿತರಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಪೊಲೀಸರು ಅಂತ್ಯ ಹಾಡಬೇಕು ಎಂದು ಒತ್ತಾಯಿಸಿದ್ದಾರೆ.
Mnagalore Bangrakuloor Miscreants show talwar and steal cows VHP visit spot. The incident has taken place early in the morning today. Also the VHP has demanded the arrest of the culprits by 24 hours.
27-04-24 07:50 pm
HK News Desk
Work From Traffic, Bangalore: ಬೆಂಗಳೂರು ಟ್ರಾಫಿ...
27-04-24 06:55 pm
Accident in Kalaburagi: ಕಲಬುರಗಿಯಲ್ಲಿ ಭೀಕರ ರಸ...
27-04-24 03:30 pm
Snake bite, Bangalore: ಆಟ ಆಡುತ್ತಿದ್ದಾಗ ಕಚ್ಚಿದ...
27-04-24 02:10 pm
ರಾಜ್ಯದ 14 ಕ್ಷೇತ್ರದಲ್ಲಿ ಶೇ. 69.23ರಷ್ಟು ಮತದಾನ,...
26-04-24 11:17 pm
28-04-24 10:51 am
HK News Desk
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
Arvind Kejriwal, Delhi High Court : ಜೈಲಿನಲ್ಲಿ...
27-04-24 02:20 pm
27-04-24 11:06 pm
Mangalore Correspondent
loksabha elections 2024, Mangalore: ದಕ್ಷಿಣ ಕನ...
27-04-24 09:43 pm
Actress Shilpa Shetty in Mangalore: ಶಿಬರೂರು ಕ...
27-04-24 06:40 pm
Kadaba Wedding, Mangalore: ತಾಳಿ ಕಟ್ಟುವ ಶುಭ ವೇ...
27-04-24 05:31 pm
Sullia Banjarumale, Voting: ಪಶ್ಚಿಮ ಘಟ್ಟಗಳ ನಡು...
26-04-24 10:45 pm
27-04-24 01:37 pm
Bangalore Correspondent
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm