ಬ್ರೇಕಿಂಗ್ ನ್ಯೂಸ್
03-12-21 02:42 pm HK Desk news ಕ್ರೈಂ
ಮಂಗಳೂರು, ಡಿ.3: ಮನೆಯ ಹೊರಭಾಗದಲ್ಲಿ ಕಟ್ಟಿಹಾಕಿದ್ದ ಮೂರು ದನಗಳನ್ನು ಮನೆಯವರಿಗೆ ತಲವಾರು ತೋರಿಸಿ, ಸ್ಕಾರ್ಪಿಯೋ ವಾಹನದಲ್ಲಿ ಹೊತ್ತೊಯ್ದ ಘಟನೆ ಕುಳೂರಿನಲ್ಲಿ ನಡೆದಿದ್ದು, ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಇತ್ತೀಚೆಗೆ ನಾಗನ ಕಲ್ಲಿಗೆ ಹಾನಿ ಘಟನೆ ನಡೆದಿದ್ದ ಪ್ರದೇಶದ ಕುಳೂರಿನ ಉಮೇಶ್ ಎಂಬವರ ಮನೆಯ ಆವರಣದಲ್ಲಿ ಘಟನೆ ನಡೆದಿದೆ. ಇಂದು ನಸುಕಿನ ಜಾವ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ನಾಲ್ಕು ಮಂದಿ ಸೇರಿ ಮನೆಯ ಹೊರಗೆ ಕಟ್ಟಿಹಾಕಿದ್ದ ದನಗಳನ್ನು ಸ್ಕಾರ್ಪಿಯೋ ವಾಹನದಲ್ಲಿ ತುಂಬಿಸುತ್ತಿದ್ದುದನ್ನು ಅದೇ ಪರಿಸರದ ಜನರು ನೋಡಿದ್ದಾರೆ. ಈ ಬಗ್ಗೆ ಮನೆಯವರಿಗೆ ತಿಳಿಸಿದ್ದು, ಬಳಿಕ ಸ್ಥಳೀಯರು ಬೊಬ್ಬೆ ಹಾಕುತ್ತಲೇ ಮೂರು ದನಗಳ ಜೊತೆ ಸ್ಕಾರ್ಪಿಯೋ ವಾಹನದಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.


ಈ ಬಗ್ಗೆ ಉಮೇಶ್ ಮತ್ತು ಬಜರಂಗದಳ ಸಂಘಟನೆಯ ನಾಯಕರು ಕಾವೂರು ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಅಲ್ಲದೆ, ಬಜರಂಗದಳ ಸಂಘಟನೆಯ ಪ್ರಮುಖರು ಸದ್ರಿ ಪ್ರದೇಶಕ್ಕೆ ಭೇಟಿ ನೀಡಿದ್ದು, ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಕೃತ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು, ಕದ್ದೊಯ್ದ ಗೋವುಗಳನ್ನು ಪತ್ತೆಮಾಡಿ ಮತ್ತೆ ತಂದು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಸ್ಥಳೀಯ ಪರಿಸರದ ನಿವಾಸಿಗಳು ಮತ್ತು ಮಂಗಳೂರಿನ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಡಿ.4ರಂದು ಕಾವೂರು ಠಾಣೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ.


ಕಾವೂರು, ಪಂಜಿಮೊಗರು, ಕುಳೂರು ಪರಿಸರದಲ್ಲಿ ಕಳೆದ ಹಲವು ದಿನಗಳಲ್ಲಿ ಇದೇ ರೀತಿ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದೊಯ್ಯುವ ಕೃತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಸ್ಥಳೀಯರು ದೂರು ದಾಖಲಿಸಿಲ್ಲ. ಇಂದಿನ ಕೃತ್ಯ ಬಯಲಾಗುತ್ತಿದ್ದಂತೆ, ನಮ್ಮ ದನವನ್ನೂ ಇದೇ ರೀತಿ ಕದ್ದೊಯ್ದಿದ್ದಾರೆ ಎಂದು ಹಲವರು ಹೇಳತೊಡಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪರಿಸರದ ಜನರು ಆಕ್ರೋಶಿತರಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಪೊಲೀಸರು ಅಂತ್ಯ ಹಾಡಬೇಕು ಎಂದು ಒತ್ತಾಯಿಸಿದ್ದಾರೆ.
Mnagalore Bangrakuloor Miscreants show talwar and steal cows VHP visit spot. The incident has taken place early in the morning today. Also the VHP has demanded the arrest of the culprits by 24 hours.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm