ಬ್ರೇಕಿಂಗ್ ನ್ಯೂಸ್
14-09-20 11:08 am Headline Karnataka News Network ಕ್ರೈಂ
ಹೊಸದಿಲ್ಲಿ, ಸೆಪ್ಟೆಂಬರ್ 14: ಕಳೆದ ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದಲ್ಲಿ ಜವಾಹರಲಾಲ್ ನೆಹರೂ ವಿವಿಯ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ.
ಕನಿಷ್ಠ 53 ಮಂದಿ ಮೃತಪಟ್ಟು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡ ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಪಡೆಯ ವಿಶೇಷ ಘಟಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿತ್ತು. ಖಾಲಿದ್ ಅವರನ್ನು ರವಿವಾರ ವಿಚಾರಣೆ ಸಲುವಾಗಿ ಕರೆಸಿಕೊಳ್ಳಲಾಗಿತ್ತು ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೂ ಮುನ್ನ ಎರಡು ತಿಂಗಳಲ್ಲಿ ಎರಡು ಬಾರಿ ಖಾಲಿದ್ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. "ರವಿವಾರ ರಾತ್ರಿ ಖಾಲಿದ್ ಅವರನ್ನು ಬಂಧಿಸಲಾಗಿದೆ" ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ವಿಶೇಷ ಘಟಕ ಕಳೆದ ತಿಂಗಳು ನ್ಯಾಯಾಲಯದಲ್ಲಿ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಮುನ್ನ ಖಾಲಿದ್ ಅವರು ಮಾಜಿ ಎಎಪಿ ಕೌನ್ಸಿಲರ್ ತಾಹೀರ್ ಹುಸೈನ್ ಮತ್ತು ಹೋರಾಟಗಾರರಾದ ಖಾಲಿದ್ ಸೈಫಿ ಜತೆ ಸೇರಿ ದೆಹಲಿ ಗಲಭೆಯ ಸಂಚು ರೂಪಿಸಿದ್ದರು. ನಾಲ್ಕು ಆರೋಪಪಟ್ಟಿಗಳಲ್ಲಿ ವಿವರಿಸಿದಂತೆ ಎಎಪಿ ಮಾಜಿ ಕೌನ್ಸಿಲರ್ ಹುಸೈನ್ ಹಾಗೂ ಸೈಫಿಯವರನ್ನು ಖಾಲಿದ್ ಜನವರಿ 8ರಂದು ಶಹೀನ್ ಭಾಗ್ ಧರಣಿ ಸ್ಥಳದಲ್ಲಿ ಭೇಟಿ ಮಾಡಿ ದಂಗೆಯ ಯೋಜನೆ ರೂಪಿಸಿದ್ದರು. ಆದರೆ ಖಾಲಿದ್ ಪತ್ರಿಕಾ ಹೇಳಿಕೆ ನೀಡಿ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು.
ತಾಹೀರ್ ಹುಸೈನ್, ಜಾಮಿಯಾ ವಿದ್ಯಾರ್ಥಿ ಮೀರನ್ ಹೈದರ್, ಜಾಮಿಯಾ ಸಂಚಾಲನಾ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗರ್ ಮತ್ತು ಪಿಂಜ್ರಾ ಟೋಡ್ ಹೋರಾಟಗಾರ್ತಿ ನತಾಶಾ ನರ್ವಾಲ್ ಹಾಗೂ ದೇವಾಂಗನಾ ಕಲಿತಾ ಅವರನ್ನು ಈಗಾಗಲೇ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm