ಬ್ರೇಕಿಂಗ್ ನ್ಯೂಸ್
14-09-20 11:08 am Headline Karnataka News Network ಕ್ರೈಂ
ಹೊಸದಿಲ್ಲಿ, ಸೆಪ್ಟೆಂಬರ್ 14: ಕಳೆದ ಫೆಬ್ರವರಿಯಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದಲ್ಲಿ ಜವಾಹರಲಾಲ್ ನೆಹರೂ ವಿವಿಯ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ.
ಕನಿಷ್ಠ 53 ಮಂದಿ ಮೃತಪಟ್ಟು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡ ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಪಡೆಯ ವಿಶೇಷ ಘಟಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿತ್ತು. ಖಾಲಿದ್ ಅವರನ್ನು ರವಿವಾರ ವಿಚಾರಣೆ ಸಲುವಾಗಿ ಕರೆಸಿಕೊಳ್ಳಲಾಗಿತ್ತು ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೂ ಮುನ್ನ ಎರಡು ತಿಂಗಳಲ್ಲಿ ಎರಡು ಬಾರಿ ಖಾಲಿದ್ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. "ರವಿವಾರ ರಾತ್ರಿ ಖಾಲಿದ್ ಅವರನ್ನು ಬಂಧಿಸಲಾಗಿದೆ" ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ವಿಶೇಷ ಘಟಕ ಕಳೆದ ತಿಂಗಳು ನ್ಯಾಯಾಲಯದಲ್ಲಿ ಸಲ್ಲಿಸಿದ ಆರೋಪಪಟ್ಟಿ ಪ್ರಕಾರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಮುನ್ನ ಖಾಲಿದ್ ಅವರು ಮಾಜಿ ಎಎಪಿ ಕೌನ್ಸಿಲರ್ ತಾಹೀರ್ ಹುಸೈನ್ ಮತ್ತು ಹೋರಾಟಗಾರರಾದ ಖಾಲಿದ್ ಸೈಫಿ ಜತೆ ಸೇರಿ ದೆಹಲಿ ಗಲಭೆಯ ಸಂಚು ರೂಪಿಸಿದ್ದರು. ನಾಲ್ಕು ಆರೋಪಪಟ್ಟಿಗಳಲ್ಲಿ ವಿವರಿಸಿದಂತೆ ಎಎಪಿ ಮಾಜಿ ಕೌನ್ಸಿಲರ್ ಹುಸೈನ್ ಹಾಗೂ ಸೈಫಿಯವರನ್ನು ಖಾಲಿದ್ ಜನವರಿ 8ರಂದು ಶಹೀನ್ ಭಾಗ್ ಧರಣಿ ಸ್ಥಳದಲ್ಲಿ ಭೇಟಿ ಮಾಡಿ ದಂಗೆಯ ಯೋಜನೆ ರೂಪಿಸಿದ್ದರು. ಆದರೆ ಖಾಲಿದ್ ಪತ್ರಿಕಾ ಹೇಳಿಕೆ ನೀಡಿ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು.
ತಾಹೀರ್ ಹುಸೈನ್, ಜಾಮಿಯಾ ವಿದ್ಯಾರ್ಥಿ ಮೀರನ್ ಹೈದರ್, ಜಾಮಿಯಾ ಸಂಚಾಲನಾ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗರ್ ಮತ್ತು ಪಿಂಜ್ರಾ ಟೋಡ್ ಹೋರಾಟಗಾರ್ತಿ ನತಾಶಾ ನರ್ವಾಲ್ ಹಾಗೂ ದೇವಾಂಗನಾ ಕಲಿತಾ ಅವರನ್ನು ಈಗಾಗಲೇ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm