ಬ್ರೇಕಿಂಗ್ ನ್ಯೂಸ್
04-12-21 07:35 pm HK Desk news ಕ್ರೈಂ
ಬೆಂಗಳೂರು, ಡಿ.4 : ಯುವತಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೇಳಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ಸಂತ್ರಸ್ತ ಯುವತಿ ನೀಡಿದ ದೂರಿನಂತೆ, ಆಕೆಯ ಸ್ನೇಹಿತರಾದ ದೇವಸಂದ್ರ ನಿವಾಸಿಗಳಾದ ಬ್ರಿಜ್ ಭೂಷಣ್ ಯಾದವ್ (21) ಮತ್ತು ವಿವೇಕ್ ರೆಡ್ಡಿ (20) ಎಂಬವರನ್ನು ಬಂಧಿಸಲಾಗಿದೆ.
ಕೆ.ಆರ್.ಪುರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಯುವತಿಗೆ ಆರೋಪಿ ಬ್ರಿಜ್ಭೂಷಣ್ ಪರಿಚಯವಾಗಿತ್ತು. ಬಳಿಕ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ಪದೇ ಪದೆ ಸಂತ್ರಸ್ತೆಯ ಮನೆಗೆ ಬರುತ್ತಿದ್ದ. ಆನಂತರ ಯುವತಿ ಆರೋಪಿ ಯಿಂದ ಅಂತರ ಕಾಯ್ದುಕೊಂಡಿದ್ದಳು. ಈ ನಡುವೆ ಆರೋಪಿ 2018ರಲ್ಲಿ 'ನನ್ನ ಬಳಿ ನಿನ್ನ ಬೆತ್ತಲೆ ಫೋಟೋಗಳಿವೆ. ಹಣ, ಚಿನ್ನಾಭರಣ ತಂದು ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋಗಳನ್ನು ಹಾಕುತ್ತೇನೆ' ಎಂದು ಬೆದರಿಕೆಯೊ ಡ್ಡುತ್ತಿದ್ದ.
ಇದರಿಂದ ಆತಂಕಗೊಂಡ ಯುವತಿ ಮನೆಯಲ್ಲಿದ್ದ 218 ಗ್ರಾಂ ಚಿನ್ನಾಭರಣ, 75 ಸಾವಿರ ರು. ನಗದು ಕೊಟ್ಟಿದ್ದಳು. ಇದೇ ವೇಳೆ, ಯುವತಿಯ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದ ಬ್ರಿಜ್ ಭೂಷಣ್ನ ಸ್ನೇಹಿತ ವಿವೇಕ್ ರೆಡ್ಡಿ 2019ರಲ್ಲಿ ಫೇಸ್ಬುಕ್ನಲ್ಲಿ ಯುವತಿಯೊಂದಿಗೆ ಚಾಟ್ ಮಾಡುತ್ತಿದ್ದ. ಬಳಿಕ ರಾಚೇನಹಳ್ಳಿ ಕೆರೆ ಬಳಿ ಕರೆಸಿಕೊಂಡು ಅಸಭ್ಯವಾಗಿ ನಡೆದುಕೊಂಡಿದ್ದ. ಒಮ್ಮೆ ಕರೆ ಮಾಡಿ 'ನಿನ್ನ ಖಾಸಗಿ ಫೋಟೋ' ಇದೆ ಎಂದು ಬೆದರಿಸಿದ್ದು ಬ್ಲಾಕ್ ಮೇಲ್ ಆರಂಭಿಸಿದ್ದ.
ಹಣ, ಒಡವೆ ಕೊಡದಿದ್ದರೆ ಖಾಸಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತೇನೆ ಎಂದು ಬೆದರಿಸಿದ್ದ. ಇದರಿಂದ ಹೆದರಿದ ಸಂತ್ರಸ್ತೆ, ತನ್ನ ಮಾವನ ಪತ್ನಿಯ ಮಾಂಗಲ್ಯ ಸರ ತಂದು ಕೊಟ್ಟಿದ್ದಳು. ಆದರೂ ಆರೋಪಿಗಳು ಪದೇ ಪದೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಇದರಿಂದ ಬೇಸತ್ತ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Bangalore Two arrested for blackmailing girl of her nude pics. Blackmailers had demanded gold and cash from her after which the girl had given it to them.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm