ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am