ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm