ನಟಿ ರಾ'ಗಿಣಿ' ಗೆ ಮತ್ತೆ ಸಂಕಷ್ಟ : ಜಾಮೀನು ಅರ್ಜಿ ಮುಂದೂಡಿಕೆ

14-09-20 02:07 pm       Bangalore Correspondent   ಕ್ರೈಂ

ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್‌ ಬುಧವಾರಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ. 

ಬೆಂಗಳೂರು, ಸೆಪ್ಟೆಂಬರ್ 14: ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಡ್ರಗ್ಸ್ ದಂಧೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಸೆ.16ಕ್ಕೆ ಮುಂದೂಡಲಾಗಿದೆ.

ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್‌ ಬುಧವಾರಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ. 

ರಾಜ್ಯ ಸರ್ಕಾರ ಕಳೆದ ವಾರ ಅಭಿಯೋಜಕರನ್ನು ನೇಮಕ ಮಾಡಿದೆ. ಅವರು ಬಂದು ಆಕ್ಷೇಪಣೆ ಸಲ್ಲಿಸಬೇಕಾಗುತ್ತದೆ. ಈಗಾಗಲೇ ಪ್ರಕರಣ ತನಿಖಾ ಹಂತದಲ್ಲಿದೆ. ತನಿಖಾ ಹಂತದಲ್ಲಿ ಇರುವ ಕಾರಣ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೇಳಿದರು. ಸಿಸಿಬಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ಕೋರ್ಟ್‌ ಜಾಮೀನು ಅರ್ಜಿಯನ್ನು ಸೆ.16ಕ್ಕೆ ಮುಂದೂಡಿತು.

ರಾಗಿಣಿ ಸೇರಿದಂತೆ 14 ಆರೋಪಿಗಳ ವಿರುದ್ಧ ನಾರ್ಕೊಟಿಕ್‌ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್‌ಸ್ಟೆನ್ಸಸ್ (ಎನ್‍ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್‌ ದಾಖಲಾಗಿದೆ. ಈ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿರುವ ಕಾರಣ ಜಾಮೀನು ಕಷ್ಟ ಎಂಬ ಮಾತು ಕೇಳಿ ಬಂದಿದೆ.

Join our WhatsApp group for latest news updates