ಬ್ರೇಕಿಂಗ್ ನ್ಯೂಸ್
10-12-21 02:42 pm HK Desk news ಕ್ರೈಂ
ಮಂಗಳೂರು, ಡಿ.10 : ಅರೆಕಾಲಿಕ ಉದ್ಯೋಗದ ಬೆನ್ನುಬಿದ್ದ ವ್ಯಕ್ತಿಯೊಬ್ಬ ಅಪರಿಚಿತ ವ್ಯಕ್ತಿಯ ಸಂದೇಶ ನಂಬಿ, ಬರೋಬ್ಬರಿ 5.31 ಲಕ್ಷ ರೂಪಾಯಿ ಕಳಕೊಂಡ ಘಟನೆ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿಯಿಂದ ನ.26ರಂದು ಪಾರ್ಟ್ ಟೈಮ್ ಉದ್ಯೋಗಕ್ಕೆ ನೀವು ಆಯ್ಕೆಯಾಗಿದ್ದೀರೆಂದು ಮೊಬೈಲಿಗೆ ಮೆಸೇಜ್ ಬಂದಿತ್ತು. ಅದರ ಜೊತೆಗೆ ಒಂದು ಲಿಂಕ್ ಕೂಡ ಇತ್ತು. ಸಂದೇಶದ ಬೆನ್ನುಹತ್ತಿದ ಮಂಗಳೂರಿನ ವ್ಯಕ್ತಿ, ಆಬಳಿಕ ಅಪರಿಚಿತನ ಜೊತೆಗೆ ವಾಟ್ಸಪ್ ನಲ್ಲಿ ಚಾಟಿಂಗ್ ಮಾಡಿದ್ದು, ಉದ್ಯೋಗದ ಬಗ್ಗೆ ಮಾಹಿತಿ ಕೇಳಿದ್ದರು.
ಉದ್ಯೋಗ ಹೇಗಿರುತ್ತದೆ, ಯಾವ ರೀತಿ ನೀವು ಮನೆಯಲ್ಲೇ ಇದ್ದು ಕೆಲಸ ಮಾಡಬಹುದು ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ನೀವು ವೆಬ್ ನಲ್ಲಿ ನಿಮ್ಮದೇ ಖಾತೆ ತೆರೆಯಬೇಕು ಎಂದಿದ್ದ ಅಪರಿಚಿತ. ಅದಕ್ಕಾಗಿ ಟೆಲಿಗ್ರಾಂ ಲಿಂಕ್ ಒಂದನ್ನು ಕಳುಹಿಸಿದ್ದ. ಆನಂತರ, ಆತ ಹೇಳಿದ ರೀತಿಯಲ್ಲೇ ಟೆಲಿಗ್ರಾಂ ಲಿಂಕ್ ತೆರೆದು ಅಲ್ಲಿ ಹೊಸತಾಗಿ ಐಡಿ, ಪಾಸ್ ವರ್ಡ್ ಹಾಕಿ ಖಾತೆ ಓಪನ್ ಮಾಡಿದ್ದಾರೆ.
ವೆಬ್ ಸೈಟ್ ಮೂಲಕ ಆನ್ಲೈನಲ್ಲಿ ವಸ್ತುಗಳನ್ನು ಆರ್ಡರ್ ಮಾಡಿ, ಕಮಿಷನ್ ಪಡೆದುಕೊಳ್ಳಬಹುದು. ನೇರವಾಗಿ ಯಾವುದೇ ವಸ್ತುಗಳನ್ನು ಖರೀದಿಸಲು ಅವಕಾಶ ಇರುತ್ತದೆ. ಆದರೆ, ಅದಕ್ಕಾಗಿ ಮೊದಲಿಗೆ ನೀವು ನಿಮ್ಮ ಬ್ಯಾಂಕ್ ಖಾತೆಗಳ ಬಗ್ಗೆ ಲಿಂಕ್ ಮಾಡಿಕೊಳ್ಳಬೇಕು ಎಂದಿದ್ದಾನೆ. ಅದರಂತೆ, ಅಪರಿಚಿತ ಕಳುಹಿಸಿದ್ದ ಕ್ಯೂ ಆರ್ ಕೋಡ್ ಲಿಂಕ್ ಮೂಲಕ ಬ್ಯಾಂಕ್ ಖಾತೆಗಳನ್ನು ವ್ಯಕ್ತಿ ಲಿಂಕ್ ಮಾಡಿದ್ದರು. ಅದರ ನಂತರ, ಹಂತ ಹಂತವಾಗಿ ಹಣ ಖಾತೆಯಿಂದ ಹೋಗಿದ್ದು, ಬರೋಬ್ಬರಿ 5.31 ಲಕ್ಷ ರೂಪಾಯಿ ಹಣ ವರ್ಗಾವಣೆಯಾಗಿತ್ತು.
ಹಣ ಕಳೆದುಕೊಂಡ ಬಗ್ಗೆ ಅಪರಿಚಿತ ವ್ಯಕ್ತಿಯ ಬಳಿ ಕೇಳಿದರೆ, ಉತ್ತರ ಇರಲಿಲ್ಲ. ಗಾಬರಿಗೊಂಡ ಹಣ ಕಳಕೊಂಡ ವ್ಯಕ್ತಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Man looses around 5.31 lakhs trusting fake job offer which was sent via telegram link. A case has been registered at the Cyber crime police station in Urwa.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am