ಬ್ರೇಕಿಂಗ್ ನ್ಯೂಸ್
10-12-21 02:42 pm HK Desk news ಕ್ರೈಂ
ಮಂಗಳೂರು, ಡಿ.10 : ಅರೆಕಾಲಿಕ ಉದ್ಯೋಗದ ಬೆನ್ನುಬಿದ್ದ ವ್ಯಕ್ತಿಯೊಬ್ಬ ಅಪರಿಚಿತ ವ್ಯಕ್ತಿಯ ಸಂದೇಶ ನಂಬಿ, ಬರೋಬ್ಬರಿ 5.31 ಲಕ್ಷ ರೂಪಾಯಿ ಕಳಕೊಂಡ ಘಟನೆ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿಯಿಂದ ನ.26ರಂದು ಪಾರ್ಟ್ ಟೈಮ್ ಉದ್ಯೋಗಕ್ಕೆ ನೀವು ಆಯ್ಕೆಯಾಗಿದ್ದೀರೆಂದು ಮೊಬೈಲಿಗೆ ಮೆಸೇಜ್ ಬಂದಿತ್ತು. ಅದರ ಜೊತೆಗೆ ಒಂದು ಲಿಂಕ್ ಕೂಡ ಇತ್ತು. ಸಂದೇಶದ ಬೆನ್ನುಹತ್ತಿದ ಮಂಗಳೂರಿನ ವ್ಯಕ್ತಿ, ಆಬಳಿಕ ಅಪರಿಚಿತನ ಜೊತೆಗೆ ವಾಟ್ಸಪ್ ನಲ್ಲಿ ಚಾಟಿಂಗ್ ಮಾಡಿದ್ದು, ಉದ್ಯೋಗದ ಬಗ್ಗೆ ಮಾಹಿತಿ ಕೇಳಿದ್ದರು.
ಉದ್ಯೋಗ ಹೇಗಿರುತ್ತದೆ, ಯಾವ ರೀತಿ ನೀವು ಮನೆಯಲ್ಲೇ ಇದ್ದು ಕೆಲಸ ಮಾಡಬಹುದು ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ನೀವು ವೆಬ್ ನಲ್ಲಿ ನಿಮ್ಮದೇ ಖಾತೆ ತೆರೆಯಬೇಕು ಎಂದಿದ್ದ ಅಪರಿಚಿತ. ಅದಕ್ಕಾಗಿ ಟೆಲಿಗ್ರಾಂ ಲಿಂಕ್ ಒಂದನ್ನು ಕಳುಹಿಸಿದ್ದ. ಆನಂತರ, ಆತ ಹೇಳಿದ ರೀತಿಯಲ್ಲೇ ಟೆಲಿಗ್ರಾಂ ಲಿಂಕ್ ತೆರೆದು ಅಲ್ಲಿ ಹೊಸತಾಗಿ ಐಡಿ, ಪಾಸ್ ವರ್ಡ್ ಹಾಕಿ ಖಾತೆ ಓಪನ್ ಮಾಡಿದ್ದಾರೆ.
ವೆಬ್ ಸೈಟ್ ಮೂಲಕ ಆನ್ಲೈನಲ್ಲಿ ವಸ್ತುಗಳನ್ನು ಆರ್ಡರ್ ಮಾಡಿ, ಕಮಿಷನ್ ಪಡೆದುಕೊಳ್ಳಬಹುದು. ನೇರವಾಗಿ ಯಾವುದೇ ವಸ್ತುಗಳನ್ನು ಖರೀದಿಸಲು ಅವಕಾಶ ಇರುತ್ತದೆ. ಆದರೆ, ಅದಕ್ಕಾಗಿ ಮೊದಲಿಗೆ ನೀವು ನಿಮ್ಮ ಬ್ಯಾಂಕ್ ಖಾತೆಗಳ ಬಗ್ಗೆ ಲಿಂಕ್ ಮಾಡಿಕೊಳ್ಳಬೇಕು ಎಂದಿದ್ದಾನೆ. ಅದರಂತೆ, ಅಪರಿಚಿತ ಕಳುಹಿಸಿದ್ದ ಕ್ಯೂ ಆರ್ ಕೋಡ್ ಲಿಂಕ್ ಮೂಲಕ ಬ್ಯಾಂಕ್ ಖಾತೆಗಳನ್ನು ವ್ಯಕ್ತಿ ಲಿಂಕ್ ಮಾಡಿದ್ದರು. ಅದರ ನಂತರ, ಹಂತ ಹಂತವಾಗಿ ಹಣ ಖಾತೆಯಿಂದ ಹೋಗಿದ್ದು, ಬರೋಬ್ಬರಿ 5.31 ಲಕ್ಷ ರೂಪಾಯಿ ಹಣ ವರ್ಗಾವಣೆಯಾಗಿತ್ತು.
ಹಣ ಕಳೆದುಕೊಂಡ ಬಗ್ಗೆ ಅಪರಿಚಿತ ವ್ಯಕ್ತಿಯ ಬಳಿ ಕೇಳಿದರೆ, ಉತ್ತರ ಇರಲಿಲ್ಲ. ಗಾಬರಿಗೊಂಡ ಹಣ ಕಳಕೊಂಡ ವ್ಯಕ್ತಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Man looses around 5.31 lakhs trusting fake job offer which was sent via telegram link. A case has been registered at the Cyber crime police station in Urwa.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm