ಬ್ರೇಕಿಂಗ್ ನ್ಯೂಸ್
14-09-20 04:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆಪ್ಟಂಬರ್ 14: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ಕಿರುತೆರೆ ನಟ ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೂ ಅವರು ಕ್ಯಾರ್ ಮಾಡಿಲ್ಲವೆಂದು ಅಲ್ಲಿಂದಲೇ ರವಿತೇಜ ಫೇಸ್ಬುಕ್ ಲೈವ್ ಬಂದು ನೋವು ಹೇಳಿಕೊಂಡಿದ್ದಾರೆ.
ಮೂಡಿಗೆರೆಯವರೇ ಆಗಿರುವ ಕಿರುತೆರೆ ನಟ ರವಿತೇಜ, ಶೂಟಿಂಗ್ ಸ್ಪಾಟ್ ಸ್ಥಳ ವೀಕ್ಷಣೆಗೆ ಹೋಗಿ ಹಿಂತಿರುಗುತ್ತಿದ್ದಾಗ ಕಿಡಿಗೇಡಿಗಳ ಕೃತ್ಯ ಕಂಡು ತಡೆಯಲು ಹೋಗಿದ್ದಾರೆ. ಆದರೆ, ಪಿಕಪ್ ವಾಹನ ನಿಲ್ಲಿಸದೆ ಪರಾರಿಯಗಲು ಯತ್ನಿಸಿದ್ದಲ್ಲದೆ ರವಿತೇಜ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಅಲ್ಲದೆ, ತಲವಾರಿನಿಂದ ರವಿತೇಜ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಡುರಾತ್ರಿಯಲ್ಲಿ ಮೂಡಿಗೆರೆ ಪೇಟೆಯಿಂದಲೇ ಫೇಸ್ಬುಕ್ ಲೈವ್ ಮಾಡಿದ ರವಿತೇಜ, ಐದಾರು ಮಂದಿ ಸೇರಿ ನನಗೆ ತಲವಾರಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೈಗೆ ಮತ್ತು ತಲೆಗೆ ಪೆಟ್ಟಾಗಿದೆ. ಸ್ವಲ್ಪದರಲ್ಲಿ ಬಚಾವಾಗಿದ್ದೇನೆ. ಬದುಕಿ ಉಳಿದಿದ್ದೇ ಹೆಚ್ಚು. ಈ ಬಗ್ಗೆ ಮೂಡಿಗೆರೆ ಪೊಲೀಸರಿಗೆ ಹೇಳಿದ್ರೂ ಕ್ಯಾರ್ ಮಾಡಿಲ್ಲ. ಇಲ್ಲಿನ ಹಿಂದು ಸಾಮ್ರಾಟರು ಎಲ್ಲಿದ್ದಾರೆ. ಹಿಂದು ಹಿಂದು ಎಂದು ಭಾಷಣ ಮಾಡೋರಿಗೆ ಇದು ಕಾಣಿಸೋಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪಾಪದ ದನಗಳನ್ನು ಕದ್ದು ಸಾಗಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನಾವು ನಂಬರ್ ನೋಟ್ ಮಾಡಿದ್ದೇವೆ. ಕೆಎ 18 - 0821 ನಂಬರಿನ ಪಿಕಪ್ ವಾಹನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮೂಡಿಗೆರೆಯನ್ನು ಈ ದನಗಳ್ಳರಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates
video
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm