ಬ್ರೇಕಿಂಗ್ ನ್ಯೂಸ್
14-09-20 04:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆಪ್ಟಂಬರ್ 14: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದನಗಳ್ಳರ ಅಟ್ಟಹಾಸವನ್ನು ಕಿರುತೆರೆ ನಟ ರವಿತೇಜ ಬಿಚ್ಚಿಟ್ಟಿದ್ದಾರೆ. ರಾತ್ರೋರಾತ್ರಿ ಪಿಕಪ್ ವಾಹನಗಳಲ್ಲಿ ಬಂದು ರಸ್ತೆಯಲ್ಲಿ ಮಲಗುತ್ತಿದ್ದ ದನಗಳನ್ನು ಹಿಡಿದು ವಾಹನಕ್ಕೆ ತುಂಬಿಸುತ್ತಿದ್ದಾಗ, ರವಿತೇಜ ಮತ್ತು ಆತನ ಗೆಳೆಯರು ತಡೆಯಲು ಹೋಗಿದ್ದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿದ್ರೂ ಅವರು ಕ್ಯಾರ್ ಮಾಡಿಲ್ಲವೆಂದು ಅಲ್ಲಿಂದಲೇ ರವಿತೇಜ ಫೇಸ್ಬುಕ್ ಲೈವ್ ಬಂದು ನೋವು ಹೇಳಿಕೊಂಡಿದ್ದಾರೆ.
ಮೂಡಿಗೆರೆಯವರೇ ಆಗಿರುವ ಕಿರುತೆರೆ ನಟ ರವಿತೇಜ, ಶೂಟಿಂಗ್ ಸ್ಪಾಟ್ ಸ್ಥಳ ವೀಕ್ಷಣೆಗೆ ಹೋಗಿ ಹಿಂತಿರುಗುತ್ತಿದ್ದಾಗ ಕಿಡಿಗೇಡಿಗಳ ಕೃತ್ಯ ಕಂಡು ತಡೆಯಲು ಹೋಗಿದ್ದಾರೆ. ಆದರೆ, ಪಿಕಪ್ ವಾಹನ ನಿಲ್ಲಿಸದೆ ಪರಾರಿಯಗಲು ಯತ್ನಿಸಿದ್ದಲ್ಲದೆ ರವಿತೇಜ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಅಲ್ಲದೆ, ತಲವಾರಿನಿಂದ ರವಿತೇಜ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಬಗ್ಗೆ ನಡುರಾತ್ರಿಯಲ್ಲಿ ಮೂಡಿಗೆರೆ ಪೇಟೆಯಿಂದಲೇ ಫೇಸ್ಬುಕ್ ಲೈವ್ ಮಾಡಿದ ರವಿತೇಜ, ಐದಾರು ಮಂದಿ ಸೇರಿ ನನಗೆ ತಲವಾರಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೈಗೆ ಮತ್ತು ತಲೆಗೆ ಪೆಟ್ಟಾಗಿದೆ. ಸ್ವಲ್ಪದರಲ್ಲಿ ಬಚಾವಾಗಿದ್ದೇನೆ. ಬದುಕಿ ಉಳಿದಿದ್ದೇ ಹೆಚ್ಚು. ಈ ಬಗ್ಗೆ ಮೂಡಿಗೆರೆ ಪೊಲೀಸರಿಗೆ ಹೇಳಿದ್ರೂ ಕ್ಯಾರ್ ಮಾಡಿಲ್ಲ. ಇಲ್ಲಿನ ಹಿಂದು ಸಾಮ್ರಾಟರು ಎಲ್ಲಿದ್ದಾರೆ. ಹಿಂದು ಹಿಂದು ಎಂದು ಭಾಷಣ ಮಾಡೋರಿಗೆ ಇದು ಕಾಣಿಸೋಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಪಾಪದ ದನಗಳನ್ನು ಕದ್ದು ಸಾಗಿಸುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ನಾವು ನಂಬರ್ ನೋಟ್ ಮಾಡಿದ್ದೇವೆ. ಕೆಎ 18 - 0821 ನಂಬರಿನ ಪಿಕಪ್ ವಾಹನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮೂಡಿಗೆರೆಯನ್ನು ಈ ದನಗಳ್ಳರಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates
video
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm