ಬ್ರೇಕಿಂಗ್ ನ್ಯೂಸ್
10-12-21 11:39 pm HK Desk news ಕ್ರೈಂ
ಮಂಗಳೂರು, ಡಿ.10 : ನಗರ ಹೊರವಲಯದ ನೀರುಮಾರ್ಗ ಬಳಿಯ ಪಡು ಎಂಬಲ್ಲಿ ಹಿಂದು ಯುವತಿಯ ಜೊತೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಡ್ಯಾರು ಪದವು ನಿವಾಸಿ ಅಬ್ದುಲ್ ರಜಾಕ್ ಯಾನೆ ರಿಯಾಜ್ ಹಲ್ಲೆಗೊಳಗಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದು ಯುವತಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ನೀರುಮಾರ್ಗದ ಬಳಿ ಯುವಕರ ತಂಡ ತಡೆದು ನಿಲ್ಲಿಸಿದೆ.


ಯುವಕ, ಯುವತಿಯನ್ನು ಕಾರಿನಲ್ಲಿ ಮಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮೊದಲೇ ಮಾಹಿತಿ ಇದ್ದ ಯುವಕರ ತಂಡ, ಪಡು ಅಂಚೆ ಕಚೇರಿ ಬಳಿ ಕಾರನ್ನು ತಡೆದು ಯುವತಿ ಮತ್ತು ಯುವಕನನ್ನು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದಿದ್ದು ಅಬ್ದುಲ್ ರಜಾಕ್ ಮೇಲೆ ಐದಾರು ಮಂದಿಯ ತಂಡ ಹಲ್ಲೆ ನಡೆಸಿದೆ. ಯುವಕನ ತಲೆಗೆ ಬೀಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು ತಲೆಗೆ ಏಟು ಬಿದ್ದು ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಆತನನ್ನು ಅಂಬುಲೆನ್ಸ್ನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಯುವತಿ ಮೇಲೂ ಏಟು ಬಿದ್ದಿದ್ದು ಆಕೆ ಓಡಿ ತಪ್ಪಿಸಿಕೊಂಡಿದ್ದಾಳೆ.


ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ತೆರಳಿದ್ದು ಕ್ರಮಕ್ಕೆ ಸೂಚಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಹಲ್ಲೆಯಾದ ಯುವಕ ಅಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
Mangalore Hindu activists assault Muslim youth with beer bottle as Hindu girl was in the car in Adyarpadavu. He has been admitted to the private hospital in city and is said to be out of danger. A case has been registered at the Rural Police Station.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm