ಬ್ರೇಕಿಂಗ್ ನ್ಯೂಸ್
11-12-21 05:15 pm HK Desk news ಕ್ರೈಂ
ಹಾಸನ, ಡಿ.11 : ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ಮಾಡಿ, ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬೆಕ್ಕ ಗ್ರಾಮದಲ್ಲಿ ನಡೆದಿದೆ.
ದೇವರು ಹೆಸರಿನಲ್ಲಿ ವಂಚನೆ ಮಾಡುವುದನ್ನು ನೋಡಿದ್ದೀವಿ, ದೇವರ ಹೆಸರಿನಲ್ಲಿ ಶಿಕ್ಷೆ ನೀಡುವುದನ್ನು ನೋಡಿದ್ದೀವಿ, ಆದರೆ ಇಲ್ಲೊಬ್ಬ ಪೂಜಾರಿ ಪೂಜೆ ವೇಳೆ ನನಗೆ ದೇವರು ಬಂದಿದೆ, ನಾನು ನಿನ್ನನ್ನು ಕಾಯಿಲೆಯಿಂದ ಗುಣಪಡಿಸುತ್ತೇನೆಂದು ಹೇಳಿ ಬೆತ್ತದ ಕೋಲಿನಲ್ಲಿ ತಲೆಗೆ ಬಲವಾಗಿ ಹೊಡೆದು ಮಹಿಳೆಯೇ ಸಾಯುವಂತಾಗಿದೆ.
ಪೂಜಾರಿ ನೀಡಿದ ಬೆತ್ತದ ಏಟಿಗೆ 47 ವರ್ಷದ ಪಾರ್ವತಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಪಾರ್ವತಿ, ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ದೇವರ ಮೊರೆ ಹೋಗಿದ್ದರು.
ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ದೇವಸ್ಥಾನದ ಪೂಜಾರಿ ತಿಳಿಸಿದ್ದು ಅದರಂತೆ ಪೂಜೆ ಮಾಡುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ. ಹಿರಿಯಾಪಟ್ಟಣದ ದೇವಸ್ಥಾನದ ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆ ನಂತರ ಪೂಜಾರಿ ಮಧು ನಾಪತ್ತೆಯಾಗಿದ್ದು, ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A woman who was beaten up by a priest in the guise of removing evil spirits bothering her health died at Hassan Institute of Medical Sciences in Hassan on Wednesday. Parvathi, 37, of Gowdarahalli in Channarayapatna was allegedly beaten up by Manu, a priest at Bekka village in Channarayapatna taluk, on Tuesday.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm