ನಾಲ್ವರು ವಿದ್ಯಾರ್ಥಿಗಳ ಅಟ್ಟಾಡಿಸಿ ಚೂರಿಯಿಂದ ಹಲ್ಲೆ ; ಪರೀಕ್ಷೆ ಮುಗಿಸಿ ಹೊರಬರುತ್ತಿದ್ದಾಗ ಘಟನೆ 

12-12-21 04:29 pm       HK Desk news   ಕ್ರೈಂ

ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚೂರಿಯಿಂದ ಇರಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ನವದೆಹಲಿ, ಡಿ.12 : ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚೂರಿಯಿಂದ ಇರಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಪೂರ್ವ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಸರ್ವೋದಯ ಬಾಲ ವಿದ್ಯಾಲಯದಲ್ಲಿ 10ನೇ ತರಗತಿ ಪರೀಕ್ಷೆ ಮುಗಿಸಿ ಶಾಲೆಯಿಂದ ಹೊರಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೇರೆ ಶಾಲೆಯ ವಿದ್ಯಾರ್ಥಿಗಳ ಗುಂಪು ಅಟ್ಟಾಡಿಸಿ ಚಾಕುವಿನಿಂದ ಇರಿದು ಗಾಯಗೊಳಿಸಿದೆ.

ಗಾಯಾಳುಗಳನ್ನು ಗೌತಮ್, ರೆಹನ್, ಫೈಜಾನ್ ಮತ್ತು ಆಯುಷ್ ಎಂದು ಗುರುತಿಸಲಾಗಿದೆ. ಇವರೆಲ್ಲ ಸರ್ವೋದಯ ಬಾಲ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದರು. ಯಾಕಾಗಿ ಈ ಹಲ್ಲೆ ಕೃತ್ಯ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ‌

Having just given their 10th standard examinations at Sarvodaya Bal Vidyalaya in East Delhi, the students were leaving the school premises when they were stabbed in a brutal knife attack by students from another school.