ಬ್ರೇಕಿಂಗ್ ನ್ಯೂಸ್
14-12-21 12:20 pm HK Desk news ಕ್ರೈಂ
ಬೆಂಗಳೂರು, ಡಿ.14 : ಗಂಡ – ಹೆಂಡತಿ ನಡುವಿನ ಜಗಳದಲ್ಲಿ ಸಣ್ಣ ಮಗು ಪ್ರಾಣವನ್ನೇ ಬಿಟ್ಟಿದೆ. ಪತ್ನಿ ಮೇಲಿನ ಸಿಟ್ಟಿನಲ್ಲಿ ತಂದೆಯೇ ತನ್ನ 10 ವರ್ಷ ಪ್ರಾಯದ ಮಗುವನ್ನು ನೀರು ತುಂಬಿದ್ದ ಸಂಪ್ ಹೊಂಡಕ್ಕೆ ಎಸೆದು ನೇಣಿಗೆ ಶರಣಾಗಿರುವ ಘಟನೆ ಸಂಪಂಗಿರಾಮ ನಗರದಲ್ಲಿ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಸುರೇಶ್ 15 ವರ್ಷಗಳ ಹಿಂದೆ ಲಕ್ಷ್ಮೀ ಎಂಬಾಕೆಯನ್ನು ಮದುವೆಯಾಗಿದ್ದು, ಮಗು ಕೂಡ ಆಗಿತ್ತು. ಆದರೆ ಮಗು ಬೆಳೆಯುತ್ತಿದ್ದಂತೆ ಬುದ್ಧಿಮಾಂದ್ಯ ಆಗಿದ್ದು, ಸಹಜ ಬೆಳವಣಿಗೆಯಿಂದ ವಂಚಿತವಾಗಿತ್ತು. ಆದರೆ, ಇದೇ ವೇಳೆ ಬೆನ್ನು ನೋವಿಗೆ ತುತ್ತಾದ ಸುರೇಶ್ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿಗೆ ಒಳಗಾಗಿದ್ದ. ಮಗ ಉದಯ್ ಸಾಯಿರಾಂ ಚಿಕಿತ್ಸೆಗೆ ಖರ್ಚು ಮಾಡಲು ಸಾಧ್ಯವಾಗದ ಕಾರಣ, ಇದೇ ವಿಚಾರದಲ್ಲಿ ಪತಿ- ಪತ್ನಿಯ ಮಧ್ಯೆ ಜಗಳ ಆಗುತ್ತಿತ್ತು.
ಸೋಮವಾರ ಬೆಳಗ್ಗೆ ಪತ್ನಿ ಇನ್ನೂ ಎದ್ದೇಳದೇ ಇರುವಾಗಲೇ ಮಗುವನ್ನು ಎತ್ತಿಕೊಂಡು ಹೋಗಿದ್ದ ಸುರೇಶ್, ಹತ್ತು ವರ್ಷದ ಮಗುವನ್ನು ನೀರಿನ ಸಂಪ್ ಗೆ ಬಿಸಾಡಿ ತೆರಳಿದ್ದ. ಆನಂತರ ಶೇಷಾದ್ರಿಪುರಂ ರೈಲ್ವೇ ಹಳಿಯ ಬಳಿ ತೆರಳಿ, ಅಲ್ಲಿ ನೇಣಿಗೆ ಶರಣಾಗಿದ್ದ. ಪತ್ನಿ ಲಕ್ಷ್ಮಿ ಎದ್ದು ನೋಡಿದಾಗ, ಮಗು ಕಾಣಿಸದೇ ಇದ್ದುದರಿಂದ ಹುಡುಕಾಟ ನಡೆಸಿದ್ದಾಳೆ. ಪತಿಯೂ ಇರದೇ ಇದ್ದರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಳು.
ಬಳಿಕ ಹುಡುಕಾಟ ನಡೆಸಿದಾಗ, ನೀರಿನ ಸಂಪ್ ನಲ್ಲಿ ಮಗುವಿನ ಶವ ಕಂಡುಬಂದಿದೆ. ಪೊಲೀಸರು ಶೇಷಾದ್ರಿಪುರಂ ಬಳಿ ಸುರೇಶ್ ನೇಣು ಬಿಗಿದ ರೀತಿಯಲ್ಲಿ ಕಂಡುಬಂದಿದ್ದನ್ನು ಪತ್ತೆ ಮಾಡಿದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man ended his life after killing his 10-year-old specially-abled son as a fallout of some domestic dispute in Sampangiramnagar locality of Bengaluru, police said on Tuesday. According to police, Suresh (40) an auto driver and had married Lakshmi 15 years ago. The couple was dejected as their son was specially-abled.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm