ಬ್ರೇಕಿಂಗ್ ನ್ಯೂಸ್
15-12-21 12:56 pm HK Desk news ಕ್ರೈಂ
ಮಂಗಳೂರು, ಡಿ.15 : ನಗರ ಹೊರವಲಯದ ನೀರುಮಾರ್ಗ ಬಳಿಯ ಪಡು ಬೊಂಡಂತಿಲ ಎಂಬಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧಿಸಿ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಹಿಂದು ಹುಡುಗಿಯನ್ನು ಕಾರಿನಲ್ಲಿ ಒಯ್ಯುತ್ತಿದ್ದ ಕಾರಣಕ್ಕೆ ಹಿಂದು ಸಂಘಟನೆಗೆ ಸೇರಿದ ಯುವಕರು ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಅಡ್ಯಾರು ಪದವು ನಿವಾಸಿ ಮಹಮ್ಮದ್ ರಿಯಾಜ್ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿತ್ತು. ಡಿ.10ರಂದು ಸಂಜೆ 7.30ರ ಸುಮಾರಿಗೆ ಘಟನೆ ನಡೆದಿತ್ತು. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಇದೀಗ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೊಂಡಂತಿಲ ನಿವಾಸಿ ಗಣೇಶ್ (23), ಚೇತನ್ ಕುಮಾರ್ (21), ಕಟ್ಟಿಂಜ ಸೈಟ್ ನಿವಾಸಿ ಕೀರ್ತಿರಾಜ್ (23), ನೀರುಮಾರ್ಗದ ಸುವೀತ್ (19), ಪರೀಕ್ಷಿತ್ (20) ಬಂಧಿತರು. ಬ್ಯಾಟ್, ರಾಡ್ ನಿಂದ ಹಲ್ಲೆ ನಡೆಸಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ರಿಯಾಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಯಾಜ್, ಹಿಂದು ಯುವತಿಯನ್ನು ಕಾರಿನಲ್ಲಿ ಒಯ್ಯುತ್ತಿದ್ದ ವಿಚಾರಕ್ಕೆ ಹಲ್ಲೆ ನಡೆಸಲಾಗಿತ್ತು. ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.


ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ
ಪೊಲೀಸರ ಮಾಹಿತಿ ಪ್ರಕಾರ, ರಿಯಾಜ್ ಹಿಂದಿನಿಂದಲೂ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದ. ಪಂಪ್ವೆಲ್ ಲಾಡ್ಜ್ ನಲ್ಲಿ ಸಿಕ್ಕಿಬಿದ್ದು ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು. ಮೈಸೂರು ಮೂಲದ ಯುವತಿಯರನ್ನು ಮಂಗಳೂರಿನ ವಿವಿಧ ಕಡೆಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದ. ಈ ಬಗ್ಗೆ ಮೊದಲೇ ಮಾಹಿತಿ ಹೊಂದಿದ್ದ ಹಿಂದು ಸಂಘಟನೆಯ ಯುವಕರು ರಿಯಾಜ್ ಮೇಲೆ ಕಣ್ಣಿಟ್ಟು ನೀರುಮಾರ್ಗದ ಬಳಿ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಮೂಲದ ಹಿಂದು ಯುವತಿ ಇದ್ದಳು ಎನ್ನಲಾಗಿದೆ.


ರಿಯಾಜ್ ಮೇಲಿನ ಹಲ್ಲೆ ಘಟನೆಯ ಬಳಿಕ ಕದ್ರಿ ಪೊಲೀಸರು ಕಂಕನಾಡಿ ಬಳಿಯ ಮನೆಯೊಂದಕ್ಕೆ ದಾಳಿ ನಡೆಸಿದ್ದು, ಅಲ್ಲಿದ್ದ ಒಬ್ಬ ಯುವತಿ ಮತ್ತು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲಿಯ ದಂಧೆಯನ್ನೂ ರಿಯಾಜ್ ಮಾಡಿಕೊಂಡಿದ್ದ ಎನ್ನುವ ಮಾಹಿತಿಯಿದ್ದು, ಪೊಲೀಸರು ಅದರ ಬಗ್ಗೆ ಕೇಸು ದಾಖಲಿಸಿದ್ದಾರೆ. ಈತನ ದಂಧೆಯ ಬಗ್ಗೆ ತಿಳಿದಿರುವ ಕಾರಣ ಮುಸ್ಲಿಂ ಸಂಘಟನೆಗಳು ಕೂಡ ರಿಯಾಜ್ ಪರ ಬೆಂಬಲವಾಗಿ ನಿಂತಿಲ್ಲ ಎಂದು ಹೇಳಲಾಗುತ್ತಿದೆ.
Regarding the assault incident at Adyar Padavu on December 10, five persons have been arrested and produced to court. The five arrested are identified as Ganesh (24), resident of Kapettu site, Bondantila village, Chetan Kumar (21) from Bantukatta, Padu, Bondantila village, Keertiraj (23), Kattinja site, Padu, Bondantila, Suveeth (20), Rangapade, Neermarga, and Pareekshit (21) residing near Padu post office, Bondatila village. Police commissioner N Shashi Kumar said, “The accused were known to Riaz. The accused and the victim had clashes earlier on past issues.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm