ಬ್ರೇಕಿಂಗ್ ನ್ಯೂಸ್
14-09-20 08:46 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ಸ್ಯಾಂಡಲ್ ವುಡ್ ಡ್ರಗ್ಸ್ ಆರೋಪ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಸೇರಿ ಐವರನ್ನು ನಗರದ 1ನೆ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆ ಆರೋಪಿಗಳನ್ನು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಯಿತು.
ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಜನಾ, ರಾಗಿಣಿ ಜೊತೆ ಆರೋಪಿಗಳನ್ನು 1ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ರಾಗಿಣಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ನಟಿ ಸಂಜನಾರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿತು.
ವಿಧಿವಿಜ್ಞಾನ ಕೇಂದ್ರದಲ್ಲಿ ಒಬ್ಬರನ್ನೊಬ್ಬರು ಬಿಟ್ಟು ಹೋಗುವಾಗ ಇಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಜನಾ ಕಣ್ಣೀರು ಹಾಕಿ ರಾಗಿಣಿಗೆ ವಿದಾಯ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೂ ಮೊದಲು ಇಬ್ಬರ ಸಂಬಂಧ ಅಷ್ಟಕ್ಕಷ್ಟೇ ಇತ್ತು. ಆದರೆ ಕಳೆದ 8 ದಿನಗಳಿಂದ ರಾಗಿಣಿ ಮತ್ತು ಸಂಜನಾ ಒಂದಾಗಿದ್ದರು. ಮೊದ ಮೊದಲು ಇಬ್ಬರ ನಡುವೆ ಅಸಮಾಧಾನವಿದ್ದರೂ ನಂತರ ಇಬ್ಬರು ಜೊತೆಯಾಗಿದ್ದರು.
ರೀಲ್ ನಲ್ಲಿ ಪೊಲೀಸ್ ಆಗಿದ್ದ ರಾಗಿಣಿ ಇಂದು ರಿಯಲ್ಲಾಗಿ ಖೈದಿಯಾಗುತ್ತಿದ್ದಾರೆ. ರಾಗಿಣಿ ಐಪಿಎಸ್ ಚಿತ್ರದಲ್ಲಿ ಕಾಪ್ ರೋಲ್ ನಲ್ಲಿ ರಾಗಿಣಿ ಮಿಂಚಿಸಿದ್ದಾರೆ.
ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ವಾಹನದಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲುಪಾಲದ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರವಾಗಿದ್ದಾರೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm