ಬ್ರೇಕಿಂಗ್ ನ್ಯೂಸ್
14-09-20 08:46 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ಸ್ಯಾಂಡಲ್ ವುಡ್ ಡ್ರಗ್ಸ್ ಆರೋಪ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಸೇರಿ ಐವರನ್ನು ನಗರದ 1ನೆ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆ ಆರೋಪಿಗಳನ್ನು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಯಿತು.
ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಜನಾ, ರಾಗಿಣಿ ಜೊತೆ ಆರೋಪಿಗಳನ್ನು 1ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ರಾಗಿಣಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ನಟಿ ಸಂಜನಾರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿತು.
ವಿಧಿವಿಜ್ಞಾನ ಕೇಂದ್ರದಲ್ಲಿ ಒಬ್ಬರನ್ನೊಬ್ಬರು ಬಿಟ್ಟು ಹೋಗುವಾಗ ಇಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಜನಾ ಕಣ್ಣೀರು ಹಾಕಿ ರಾಗಿಣಿಗೆ ವಿದಾಯ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೂ ಮೊದಲು ಇಬ್ಬರ ಸಂಬಂಧ ಅಷ್ಟಕ್ಕಷ್ಟೇ ಇತ್ತು. ಆದರೆ ಕಳೆದ 8 ದಿನಗಳಿಂದ ರಾಗಿಣಿ ಮತ್ತು ಸಂಜನಾ ಒಂದಾಗಿದ್ದರು. ಮೊದ ಮೊದಲು ಇಬ್ಬರ ನಡುವೆ ಅಸಮಾಧಾನವಿದ್ದರೂ ನಂತರ ಇಬ್ಬರು ಜೊತೆಯಾಗಿದ್ದರು.
ರೀಲ್ ನಲ್ಲಿ ಪೊಲೀಸ್ ಆಗಿದ್ದ ರಾಗಿಣಿ ಇಂದು ರಿಯಲ್ಲಾಗಿ ಖೈದಿಯಾಗುತ್ತಿದ್ದಾರೆ. ರಾಗಿಣಿ ಐಪಿಎಸ್ ಚಿತ್ರದಲ್ಲಿ ಕಾಪ್ ರೋಲ್ ನಲ್ಲಿ ರಾಗಿಣಿ ಮಿಂಚಿಸಿದ್ದಾರೆ.
ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ವಾಹನದಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲುಪಾಲದ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರವಾಗಿದ್ದಾರೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm