ಬ್ರೇಕಿಂಗ್ ನ್ಯೂಸ್
18-12-21 01:25 pm HK Desk news ಕ್ರೈಂ
ಬೆಳಗಾವಿ, ಡಿ.18 : ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಹೋರಾಟಗಾರರ ನಡುವೆ ಕಿಚ್ಚು ಹತ್ತಿಕೊಂಡಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ದ್ವೇಷದಲ್ಲಿ ಕನ್ನಡ ಪರ ಹೋರಾಟಗಾರ ಪುಂಡರು ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವ ಘಟನೆ ಬೆಳಗಾವಿಯಲ್ಲಿ ಕಿಡಿ ಹೊತ್ತಿಸಿದೆ. ಇದರ ದ್ವೇಷದಲ್ಲಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಲಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಕನ್ನಡ ಮತ್ತು ಮರಾಠಿ ಪರ ಪುಂಡರು ಕಾನೂನು ಕೈಗೆ ತೆಗೆದುಕೊಂಡಿದ್ದು ಬೀದಿಗೆ ಇಳಿದಿದ್ದಾರೆ.
ಮಹಾರಾಷ್ಟ್ರ ಗಡಿಭಾಗದಲ್ಲಿ ಕನ್ನಡಿಗರ ಕಾರು, ವಾಹನಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಲಾಗುತ್ತಿದೆ. ಬೆಳಗಾವಿ ಮಾರುಕಟ್ಟೆ ಪ್ರದೇಶದಲ್ಲಿ ಕಲ್ಲು ತೂರಾಟ ನಡೆಸಿದ್ದು, ಅಧಿವೇಶನ ಕರ್ತವ್ಯಕ್ಕೆ ಆಗಮಿಸಿರುವ ಸರಕಾರಿ ವಾಹನಗಳು, ಹೊಟೇಲ್ ಮುಂದೆ ನಿಲ್ಲಿಸಿರುವ ಕನ್ನಡಿಗರ ವಾಹನಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಬೆಳಗಾವಿ ನಗರದಲ್ಲಿ 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಿ ಪುಡಿ ಮಾಡಲಾಗಿದೆ.
ಶಿವಾಜಿ ಪ್ರತಿಮೆಗೆ ಅವಮಾನ ತಿಳಿಯುತ್ತಿದ್ದಂತೆ ಶುಕ್ರವಾರ ರಾತ್ರಿಯೇ ಮರಾಠಿಗರು ಸಾವಿರಾರು ಸಂಖ್ಯೆಯಲ್ಲಿ ಬೆಳಗಾವಿ ನಗರದಲ್ಲಿ ಸೇರಿದ್ದು, ಪ್ರತಿಭಟನೆ ನಡೆಸಿದ್ದಾರೆ. ರಾತ್ರಿ ವೇಳೆ ಬೆಳಗಾವಿಯ ಅನಗೋಳದ ಕನಕದಾಸ ಕಾಲೊನಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ಆರಂಭಿಸಿದರೆ, ಮತ್ತೊಂದೆಡೆ ಎಂಇಎಸ್ ಪರ ಹೋರಾಟಗಾರರು ಕೂಡ ಬೀದಿಗೆ ಇಳಿದಿದ್ದಾರೆ. ಇದೇ ವೇಳೆ, ಕರ್ನಾಟಕದ ಗಡಿಭಾಗ ಮಹಾರಾಷ್ಟ್ರದಲ್ಲಿರುವ ಸಾಂಗ್ಲಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಪುಂಡರು ಕನ್ನಡಿಗರ ವಾಹನಗಳು, ಕನ್ನಡದ ನಾಮಫಲಕದ ಮೇಲೆ ದಾಳಿ ಆರಂಭಿಸಿದ್ದಾರೆ. ಕನ್ನಡದಲ್ಲಿ ಹಾಕಿರುವ ಬೋರ್ಡ್ ಗಳನ್ನು ಕಿತ್ತು ಹಾಕಿ, ಮಸಿ ಬಳಿದು ಧಿಕ್ಕಾರ ಕೂಗಲು ಆರಂಭಿಸಿದ್ದಾರೆ.
ಬೆಳಗಾವಿಯ ಗಡಿಭಾಗ ಮೀರಜ್ ಪಟ್ಟಣದಲ್ಲಿ ಕನ್ನಡಿಗರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಐದು ಮಂದಿಗೆ ಗಾಯಗಳಾಗಿದ್ದು ಬಿಗುವಿನ ವಾತಾರಣ ನೆಲೆಸಿದೆ. ಶಿವಸೇನೆ ಪುಂಡರ ದಾಳಿಯಿಂದಾಗಿ ಕನ್ನಡಿಗ ವಾಹನ ಚಾಲಕರು, ವ್ಯಾಪಾರಸ್ಥರು ಭಯಗೊಂಡಿದ್ದಾರೆ. ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಮಂದಿ ಎಂಇಎಸ್ ಪುಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಬೆಳಗಾವಿ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಿ, ಪುಂಡರ ಅಟ್ಟಹಾಸಕ್ಕೆ ನಿಯಂತ್ರಣ ಹೇರಲಾಗಿದೆ. ಬೆಳಗಾವಿ ಕ್ಯಾಂಪ್, ಖಡೇಬಜಾರ್, ಮಾರ್ಕೆಟ್ ಹಾಗೂ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬೆಳಗಾವಿ ನಗರದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
This is what happens when you do politics in the name of legends. They burnt our flag by shouting Shivaji name and this happened to Shivaji statue. Is it not fair? https://t.co/eCb4rhw9cQ
— The Saffronist 🚩🇮🇳 (@Kadambaaa) December 17, 2021
Last night stones were pelted on around 10 cars during the sudden protest at Dharmveer Sambhaji Maharaj circle against the disgrace done to the statue of Chatrapati Shivaji Maharaj in Bengaluru. The police had to resort to a mild lathi charge to disperse the crowd. #belagavi pic.twitter.com/yiVVpZ8Xp5
— All About Belgaum (@allaboutbelgaum) December 17, 2021
Karnataka | A group of people staged a protest at Sambhaji Circle late night Friday condemning the "desecration of Chatrapati Shivaji Maharaj's statue at Bengaluru", demanding action against culprits behind the incident pic.twitter.com/wdETdXuz0d
— ANI (@ANI) December 17, 2021
27 people had been arrested for attacking the Sangolli Rayanna statue in the Belagavi district of Karnataka, informed the police. "27 arrested in 3 police station limits in Belagavi for attacking the Sangolli Rayanna statue," said K Tyagarajan, commissioner of police, Belagavi.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm