ಬ್ರೇಕಿಂಗ್ ನ್ಯೂಸ್
23-12-21 03:41 pm HK Desk news ಕ್ರೈಂ
ಬಿಹಾರ, ಡಿ 23: ಲೈಂಗಿಕ ದೌರ್ಜನ್ಯ ವಿರೋಧಿಸಿದ 8ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ 13 ಸೆಕೆಂಡ್ನಲ್ಲಿ 8 ಬಾರಿ ಇರಿದಿರುವ ಆಘಾತಕಾರಿ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಇದರಿಂದ ಕುಪಿತಗೊಂಡ ವ್ಯಕ್ತಿ ಆಕೆಯನ್ನು ನೆಲದ ಮೇಲೆ ತಳ್ಳಿ ಚಾಕುವಿನಿಂದ ಚುಚ್ಚು ಚುಚ್ಚಿ ಇರಿದು ಕೊಂದಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 19ರಂದು ಈ ಘಟನೆ ನಡೆದಿರುವುದಾಗಿ ದೈನಿಕ್ ಬಾಸ್ಕರ್ ವರದಿ ಮಾಡಿದೆ. ಬಾಲಕಿ ತನ್ನ ಇಬ್ಬರು ಗೆಳತಿಯರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಮಾರ್ಗ ಮಧ್ಯೆ ಅವಿತು ಕುಳಿತುಕೊಂಡಿದ್ದ ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯ ಎಸಗಿದ್ದಾನೆ.
ಸಿಸಿಟಿವಿ ದೃಶ್ಯ ವೈರಲ್ ;
ಈ ಘಟನೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಯುವಕ ಆತನ ಗೆಳೆಯನನನ್ನು ಎಷ್ಟೇ ಬಿಗಿ ಹಿಡಿದು ಎಳೆದರೂ ಆರೋಪಿ ಪದೇ ಪದೇ ಬಾಲಕಿಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ತಕ್ಷಣಕ್ಕೆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಇದಕ್ಕೂ ಮುನ್ನ ಆಕೆಗೆ ಅನೇಕ ಬಾರಿ ಕಿರುಕುಳ ನೀಡಿದ್ದ, ಶಾಲೆಗೆ ಹೋಗುವಾಗ ಬರುವಾಗ ಆಕೆಗೆ ಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತೆ ಕುಟುಂಬ ತಿಳಿಸಿದೆ.
A class 8 student in Bihar's Gopalganj district was stabbed eight times in 13 seconds by her alleged stalker after she resisted molestation attempts.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm