ಬ್ರೇಕಿಂಗ್ ನ್ಯೂಸ್
23-12-21 03:41 pm HK Desk news ಕ್ರೈಂ
ಬಿಹಾರ, ಡಿ 23: ಲೈಂಗಿಕ ದೌರ್ಜನ್ಯ ವಿರೋಧಿಸಿದ 8ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ 13 ಸೆಕೆಂಡ್ನಲ್ಲಿ 8 ಬಾರಿ ಇರಿದಿರುವ ಆಘಾತಕಾರಿ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಇದರಿಂದ ಕುಪಿತಗೊಂಡ ವ್ಯಕ್ತಿ ಆಕೆಯನ್ನು ನೆಲದ ಮೇಲೆ ತಳ್ಳಿ ಚಾಕುವಿನಿಂದ ಚುಚ್ಚು ಚುಚ್ಚಿ ಇರಿದು ಕೊಂದಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 19ರಂದು ಈ ಘಟನೆ ನಡೆದಿರುವುದಾಗಿ ದೈನಿಕ್ ಬಾಸ್ಕರ್ ವರದಿ ಮಾಡಿದೆ. ಬಾಲಕಿ ತನ್ನ ಇಬ್ಬರು ಗೆಳತಿಯರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಮಾರ್ಗ ಮಧ್ಯೆ ಅವಿತು ಕುಳಿತುಕೊಂಡಿದ್ದ ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯ ಎಸಗಿದ್ದಾನೆ.
ಸಿಸಿಟಿವಿ ದೃಶ್ಯ ವೈರಲ್ ;
ಈ ಘಟನೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಯುವಕ ಆತನ ಗೆಳೆಯನನನ್ನು ಎಷ್ಟೇ ಬಿಗಿ ಹಿಡಿದು ಎಳೆದರೂ ಆರೋಪಿ ಪದೇ ಪದೇ ಬಾಲಕಿಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ತಕ್ಷಣಕ್ಕೆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಇದಕ್ಕೂ ಮುನ್ನ ಆಕೆಗೆ ಅನೇಕ ಬಾರಿ ಕಿರುಕುಳ ನೀಡಿದ್ದ, ಶಾಲೆಗೆ ಹೋಗುವಾಗ ಬರುವಾಗ ಆಕೆಗೆ ಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತೆ ಕುಟುಂಬ ತಿಳಿಸಿದೆ.
A class 8 student in Bihar's Gopalganj district was stabbed eight times in 13 seconds by her alleged stalker after she resisted molestation attempts.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am