ಬ್ರೇಕಿಂಗ್ ನ್ಯೂಸ್
23-12-21 03:41 pm HK Desk news ಕ್ರೈಂ
ಬಿಹಾರ, ಡಿ 23: ಲೈಂಗಿಕ ದೌರ್ಜನ್ಯ ವಿರೋಧಿಸಿದ 8ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ 13 ಸೆಕೆಂಡ್ನಲ್ಲಿ 8 ಬಾರಿ ಇರಿದಿರುವ ಆಘಾತಕಾರಿ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಇದರಿಂದ ಕುಪಿತಗೊಂಡ ವ್ಯಕ್ತಿ ಆಕೆಯನ್ನು ನೆಲದ ಮೇಲೆ ತಳ್ಳಿ ಚಾಕುವಿನಿಂದ ಚುಚ್ಚು ಚುಚ್ಚಿ ಇರಿದು ಕೊಂದಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 19ರಂದು ಈ ಘಟನೆ ನಡೆದಿರುವುದಾಗಿ ದೈನಿಕ್ ಬಾಸ್ಕರ್ ವರದಿ ಮಾಡಿದೆ. ಬಾಲಕಿ ತನ್ನ ಇಬ್ಬರು ಗೆಳತಿಯರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಮಾರ್ಗ ಮಧ್ಯೆ ಅವಿತು ಕುಳಿತುಕೊಂಡಿದ್ದ ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯ ಎಸಗಿದ್ದಾನೆ.
ಸಿಸಿಟಿವಿ ದೃಶ್ಯ ವೈರಲ್ ;
ಈ ಘಟನೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಯುವಕ ಆತನ ಗೆಳೆಯನನನ್ನು ಎಷ್ಟೇ ಬಿಗಿ ಹಿಡಿದು ಎಳೆದರೂ ಆರೋಪಿ ಪದೇ ಪದೇ ಬಾಲಕಿಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ತಕ್ಷಣಕ್ಕೆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಇದಕ್ಕೂ ಮುನ್ನ ಆಕೆಗೆ ಅನೇಕ ಬಾರಿ ಕಿರುಕುಳ ನೀಡಿದ್ದ, ಶಾಲೆಗೆ ಹೋಗುವಾಗ ಬರುವಾಗ ಆಕೆಗೆ ಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತೆ ಕುಟುಂಬ ತಿಳಿಸಿದೆ.
A class 8 student in Bihar's Gopalganj district was stabbed eight times in 13 seconds by her alleged stalker after she resisted molestation attempts.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm