ಬ್ರೇಕಿಂಗ್ ನ್ಯೂಸ್
23-12-21 09:55 pm HK Desk news ಕ್ರೈಂ
ಬೆಂಗಳೂರು, ಡಿ.23 : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜೀವಾವಧಿ ಶಿಕ್ಷೆ ನೀಡಿದ್ದ ಸೆಷನ್ಸ್ ಕೋರ್ಟ್ ತೀರ್ಪನ್ನು ಹೈಕೋರ್ಟ್ ತಡೆ ಹೇರಿದ್ದು, ಆರೋಪಿಯನ್ನು ಜಾಮೀನಿನಲ್ಲಿ ಬಿಡುಗಡೆ ಮಾಡಲು ಆದೇಶಿಸಿದೆ.
ಈ ಕುರಿತು ಶಿಕ್ಷೆಗೊಳಗಾಗಿದ್ದ ರಾಜೇಶ್ವರಿ ಶೆಟ್ಟಿ ಪರ ವಕೀಲರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾ.ಜಿ.ನರೇಂದರ್ ಮತ್ತು ನ್ಯಾ.ಇ.ಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಹಷ್ಮತ್ ಪಾಷ, ಇದೊಂದು ಸಾಂದರ್ಭಿಕ ಘಟನೆಯಾಗಿದ್ದು, ಪ್ರಕರಣದಲ್ಲಿ ಹತ್ಯೆಗೀಡಾಗಿರುವ ಭಾಸ್ಕರ ಶೆಟ್ಟಿಯ ಪತ್ನಿಗೆ ಶಿಕ್ಷೆ ನೀಡಲಾಗಿದೆ. ಮೇಲ್ನೋಟಕ್ಕೆ ಇವರ ವಿರುದ್ಧ ಸಾಕ್ಷ್ಯಗಳೇ ಇಲ್ಲ. ಹೋಮಕುಂಡದಲ್ಲಿ ಶವ ಸುಟ್ಟಿರುವುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ಡಿಎನ್ಎಗೆ ಸಂಬಂಧಿಸಿ ವಿಧಿವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿಯನ್ನು ನಂಬಲು ಸಾಧ್ಯವಿಲ್ಲ. ಇಂತಹ ಅಂಶಗಳನ್ನೆಲ್ಲಾ ವಿಚಾರಣಾ ನ್ಯಾಯಾಲಯ ಪರಿಶೀಲನೆ ಮಾಡದೆ ಶಿಕ್ಷೆ ವಿಧಿಸಿದ್ದು ಸರಿಯಲ್ಲ ಎಂದು ವಾದಿಸಿದ್ದಾರೆ.

ಆದ್ದರಿಂದ ಸೆಷನ್ಸ್ ಕೋರ್ಟ್ ನೀಡಿರುವ ತೀರ್ಪನ್ನು ಅಮಾನತ್ತಿನಲ್ಲಿರಿಸಿ, ಶಿಕ್ಷೆಗೊಳಗಾದ ರಾಜೇಶ್ವರಿ ಶೆಟ್ಟಿಗೆ ಜಾಮೀನು ನೀಡಬೇಕು ಎಂದು ಕೇಳಿಕೊಂಡರು. ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ, ಷರತ್ತು ಬದ್ಧ ಜಾಮೀನು ನೀಡಿ ಆದೇಶ ಮಾಡಿದೆ.

ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು 2016ರ ಜುಲೈ 28ರಂದು ಉಡುಪಿಯ ಇಂದ್ರಾಳಿಯಲ್ಲಿರುವ ಮನೆಯಿಂದ ನಾಪತ್ತೆಯಾಗಿದ್ದರು. ಎಂಟು ದಿನಗಳ ಬಳಿಕ ಪೊಲೀಸರು ರಾಜೇಶ್ವರಿ ಶೆಟ್ಟಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆನಂತರ ಭಾಸ್ಕರ ಶೆಟ್ಟಿ ಕೊಲೆಯಾಗಿದ್ದು ತಿಳಿದುಬಂದಿತ್ತು. ಪ್ರಕರಣದಲ್ಲಿ ಕೊಲೆ ಮತ್ತು ಕೊಲೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ರಾಜೇಶ್ವರಿ ಶೆಟ್ಟಿ ಅವರನ್ನು ತಪ್ಪಿತಸ್ಥರು ಎಂದು ತೀರ್ಮಾನಿಸಿದ್ದ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. 2021ರ ಜೂನ್ 8ರಂದು ಈ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.
Rajeshwari Shetty, the main accused in the murder of entrepreneur Bhaskar Shetty, was granted bail by the high court (HC) on Thursday December 23. It may be recalled, the district and sessions court here pronounced its judgement in the case in June earlier this year. The court held three persons including the wife and son of the deceased as guilty of murder and awarded them life imprisonment. Rajeshwari had knocked the doors of the high court questioning the sentence of the district and sessions court.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm