ಬ್ರೇಕಿಂಗ್ ನ್ಯೂಸ್
26-12-21 01:10 pm Mangalore Correspondent ಕ್ರೈಂ
ಮಂಗಳೂರು, ಡಿ.26 : ಕ್ರಿಸ್ತಿಯನ್ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ, ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ನೊಂದ ಹುಡುಗಿಯ ತಾಯಿ ಮಂಗಳೂರಿನ ವಿಶ್ವ ಹಿಂದು ಪರಿಷತ್ ಮುಖಂಡರಿಗೆ ರಕ್ಷಣೆಗೆ ಮನವಿ ಮಾಡಿದ್ದಾರೆ.
ಯುವತಿ ಮಂಗಳೂರಿನ ಬಿಜೈ ನಿವಾಸಿಯಾಗಿದ್ದು ಆಕೆಯನ್ನು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತ ಕಳೆದ ಮೂರು ವರ್ಷಗಳಿಂದ ದುರುಪಯೋಗ ಮಾಡುತ್ತಿದ್ದಾನೆ ಎಂದು ದೂರಲಾಗಿದೆ. ಸಿದ್ದಿಕ್ ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದು ಹಲವಾರು ಕೇಸು ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

ಯುವತಿ ತನ್ನನ್ನು ಸಿದ್ದಿಕ್ ಮದುವೆಯಾಗುವುದಾಗಿ ಹೇಳುತ್ತಿದ್ದು ಅದೇ ಭ್ರಮೆಯಲ್ಲಿ ಆತನ ಜೊತೆ ತಿರುಗಾಡುತ್ತಿದ್ದಾಳೆ. ಈ ಬಗ್ಗೆ ಯುವತಿಯ ತಾಯಿ ಕ್ರಿಸ್ತಿಯನ್ ಧರ್ಮಗುರುಗಳಿಗೂ ದೂರು ನೀಡಿದ್ದಾರೆ. ಅಲ್ಲದೆ, ಉರ್ವಾ ಠಾಣೆಯಲ್ಲಿ ದೂರನ್ನೂ ನೀಡಿದ್ದಾರೆ.
ಮಹಮ್ಮದ್ ಸಿದ್ದಿಕ್ ಈಗಾಗಲೇ ಎರಡು- ಮೂರು ಮದುವೆಯಾಗಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಮಂಗಳೂರು ಮತ್ತು ಕೊಡಗಿನಲ್ಲಿ ಡ್ರಗ್ಸ್ ಪೂರೈಸುತ್ತಿರುವ ವಹಿವಾಟು ನಡೆಸುತ್ತಿದ್ದಾನೆ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ, ಡ್ರಗ್ಸ್ ಸೆಕ್ಸ್ ಜಿಹಾದಿಗೆ ಬಲಿಯಾಗಿರುವ ಯುವತಿಗೆ ನ್ಯಾಯ ಕೊಡಿಸಬೇಕೆಂದು ವಿಹಿಂಪ ನಾಯಕ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
Mangalore Christian girl cheated of Love and sex victims mother approaches VHP for help.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm