ಬ್ರೇಕಿಂಗ್ ನ್ಯೂಸ್
26-12-21 01:10 pm Mangalore Correspondent ಕ್ರೈಂ
ಮಂಗಳೂರು, ಡಿ.26 : ಕ್ರಿಸ್ತಿಯನ್ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ, ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ದುರ್ಬಳಕೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ನೊಂದ ಹುಡುಗಿಯ ತಾಯಿ ಮಂಗಳೂರಿನ ವಿಶ್ವ ಹಿಂದು ಪರಿಷತ್ ಮುಖಂಡರಿಗೆ ರಕ್ಷಣೆಗೆ ಮನವಿ ಮಾಡಿದ್ದಾರೆ.
ಯುವತಿ ಮಂಗಳೂರಿನ ಬಿಜೈ ನಿವಾಸಿಯಾಗಿದ್ದು ಆಕೆಯನ್ನು ಕಾಟಿಪಳ್ಳದ ಕೃಷ್ಣಾಪುರ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತ ಕಳೆದ ಮೂರು ವರ್ಷಗಳಿಂದ ದುರುಪಯೋಗ ಮಾಡುತ್ತಿದ್ದಾನೆ ಎಂದು ದೂರಲಾಗಿದೆ. ಸಿದ್ದಿಕ್ ಮಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಆಗಿದ್ದು ಹಲವಾರು ಕೇಸು ಎದುರಿಸುತ್ತಿದ್ದಾನೆ ಎನ್ನಲಾಗಿದೆ.
ಯುವತಿ ಅಲೋಶಿಯಸ್ ಕಾಲೇಜಿನಲ್ಲಿ ಕಾಲೇಜು ಮುಗಿಸಿದ್ದು ಅಲ್ಲಿಯೇ ಡ್ರಗ್ಸ್ ಚಟ ಹತ್ತಿಸಿಕೊಂಡಿದ್ದಳು. ಆನಂತರ ಡ್ರಗ್ಸ್ ಇಲ್ಲದೆ ಬದುಕುವುದೇ ಅಸಾಧ್ಯ ಎನ್ನುವಷ್ಟರ ಮಟ್ಟಿಗೆ ಡ್ರಗ್ಸ್ ಚಟಕ್ಕೆ ಬಿದ್ದಿದ್ದಳು. ನಡುರಾತ್ರಿಯಲ್ಲಿ ಬೈಕಿನಲ್ಲಿ ಬರುವ ಯುವಕರು ಯುವತಿಯನ್ನು ಕರೆದೊಯ್ಯುತ್ತಿದ್ದು ಆಬಳಿಕ ಹಲವು ದಿನಗಳ ಕಾಲ ಇಟ್ಟುಕೊಳ್ಳುತ್ತಿದ್ದರು. ಮಗಳು ಎಲ್ಲಿದ್ದಾಳೆ ಎನ್ನುವುದು ತಿಳಿಯದೆ ಹೆತ್ತವರು ಆತಂಕಕ್ಕೆ ಒಳಗಾಗುತ್ತಿದ್ದರು. ಮಗಳ ಈ ರೀತಿಯ ನಡತೆಯಿಂದ ತೀವ್ರ ಬೇಸತ್ತಿದ್ದ ತಂದೆ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿ ಸಾವು ಕಂಡಿದ್ದರು.

ಯುವತಿ ತನ್ನನ್ನು ಸಿದ್ದಿಕ್ ಮದುವೆಯಾಗುವುದಾಗಿ ಹೇಳುತ್ತಿದ್ದು ಅದೇ ಭ್ರಮೆಯಲ್ಲಿ ಆತನ ಜೊತೆ ತಿರುಗಾಡುತ್ತಿದ್ದಾಳೆ. ಈ ಬಗ್ಗೆ ಯುವತಿಯ ತಾಯಿ ಕ್ರಿಸ್ತಿಯನ್ ಧರ್ಮಗುರುಗಳಿಗೂ ದೂರು ನೀಡಿದ್ದಾರೆ. ಅಲ್ಲದೆ, ಉರ್ವಾ ಠಾಣೆಯಲ್ಲಿ ದೂರನ್ನೂ ನೀಡಿದ್ದಾರೆ.
ಮಹಮ್ಮದ್ ಸಿದ್ದಿಕ್ ಈಗಾಗಲೇ ಎರಡು- ಮೂರು ಮದುವೆಯಾಗಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಮಂಗಳೂರು ಮತ್ತು ಕೊಡಗಿನಲ್ಲಿ ಡ್ರಗ್ಸ್ ಪೂರೈಸುತ್ತಿರುವ ವಹಿವಾಟು ನಡೆಸುತ್ತಿದ್ದಾನೆ ಎಂದು ವಿಶ್ವ ಹಿಂದು ಪರಿಷತ್ ನಾಯಕರು ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ, ಡ್ರಗ್ಸ್ ಸೆಕ್ಸ್ ಜಿಹಾದಿಗೆ ಬಲಿಯಾಗಿರುವ ಯುವತಿಗೆ ನ್ಯಾಯ ಕೊಡಿಸಬೇಕೆಂದು ವಿಹಿಂಪ ನಾಯಕ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
Mangalore Christian girl cheated of Love and sex victims mother approaches VHP for help.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm