ಬ್ರೇಕಿಂಗ್ ನ್ಯೂಸ್
15-09-20 07:39 pm Headline Karnataka News Network ಕ್ರೈಂ
ಆಲಪ್ಪುಳ, ಸೆಪ್ಟೆಂಬರ್15: ಸೆಲ್ಫಿ ಹುಚ್ಚಿನಿಂದ ಏನೆಲ್ಲ ದುರಂತ ಎದುರಾದ್ರೂ ಜನರು ಎಚ್ಚತ್ತುಕೊಂಡಿಲ್ಲ. ಇಲ್ಲೊಬ್ಬಳು ತಾಯಿ, ಬೀಚ್ ನಲ್ಲಿ ನಿಂತು ಮಗುವಿನ ಜೊತೆ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಮಗುವನ್ನೇ ಕಳಕೊಂಡಿದ್ದಾಳೆ. ತಾಯಿಯ ಸೆಲ್ಫೀ ಹುಚ್ಚಿನಿಂದಾಗಿ ಕೈನಲ್ಲಿ ಹಿಡಿದುಕೊಂಡಿದ್ದ ಎರಡು ವರ್ಷದ ಮಗು ಸಮುದ್ರಪಾಲಾದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಪೊಲೀಸರು ಮತ್ತು ಸ್ಥಳೀಯರ ಹುಡುಕಾಟದ ಬಳಿಕ ಮಗುವಿನ ಶವ ಎರಡು ದಿನಗಳ ನಂತರ ಆಲಪ್ಪುಳದ ಗೆಲಿಲಿಯೋ ಬೀಚ್ ನಲ್ಲಿ ಪತ್ತೆಯಾಗಿದೆ. ಮೃತ ಮಗುವಿನ ಹೆಸರು ಅಧಿಕೃಷ್ಣ ಎಂದು ದಿ ಹಿಂದು ಪತ್ರಿಕೆ ವರದಿ ಮಾಡಿದೆ. ತಟರಕ್ಷಣಾ ಪಡೆ ಮತ್ತು ಸ್ಥಳೀಯ ಮೀನುಗಾರರು ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ತನ್ನಿಬ್ಬರು ಮಕ್ಕಳು ಮತ್ತು ಸದರನ ಇನ್ನೊಂದು ಮಗುವಿನ ಜೊತೆ ಬೀಚ್ ನೋಡಲು ಬಂದಿದ್ದರು. ಸಮುದ್ರ ಅಬ್ಬರ ಹೆಚ್ಚಿದ್ದರಿಂದ ಅಲ್ಲಿನ ಸೆಕ್ಯುರಿಟಿ ಬೀಚ್ ಹೋಗದಂತೆ ತಡೆಯುತ್ತಿದ್ದ. ಆದರೆ ತಾಯಿ, ಮಕ್ಕಳು ಸೆಕ್ಯುರಿಟಿಯ ಕಣ್ಣು ತಪ್ಪಿಸಿ ಅಲ್ಲಿನ ಇಎಸ್ಐ ಆಸ್ಪತ್ರೆಯ ಎಡೆಯಿಂದ ನುಸುಳಿಕೊಂಡು ಬೀಚ್ ನತ್ತ ಬಂದಿದ್ದರು. ಬೀಚ್ ನಲ್ಲಿ ಮಕ್ಕಳ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಬೃಹತ್ ಅಲೆಯೊಂದು ಎದ್ದು ಬಂದಿದ್ದು ತಾಯಿ, ಮಕ್ಕಳು ಬ್ಯಾಲೆನ್ಸ್ ತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ದೂರದಲ್ಲಿ ನಿಂತಿದ್ದ ಸಂಬಂಧಿಕನೊಬ್ಬ ಓಡಿ ಬಂದು ಮಹಿಳೆ ಮತ್ತು ಆರು ಮತ್ತು ಏಳು ವರ್ಷದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಮಗು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಒಂದು ಕ್ಷಣದ ಮೈಮರೆವು ಮಗುವನ್ನು ಬಲಿ ತೆಗೆದುಕೊಂಡಿತ್ತು.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm