ಬ್ರೇಕಿಂಗ್ ನ್ಯೂಸ್
15-09-20 07:39 pm Headline Karnataka News Network ಕ್ರೈಂ
ಆಲಪ್ಪುಳ, ಸೆಪ್ಟೆಂಬರ್15: ಸೆಲ್ಫಿ ಹುಚ್ಚಿನಿಂದ ಏನೆಲ್ಲ ದುರಂತ ಎದುರಾದ್ರೂ ಜನರು ಎಚ್ಚತ್ತುಕೊಂಡಿಲ್ಲ. ಇಲ್ಲೊಬ್ಬಳು ತಾಯಿ, ಬೀಚ್ ನಲ್ಲಿ ನಿಂತು ಮಗುವಿನ ಜೊತೆ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಮಗುವನ್ನೇ ಕಳಕೊಂಡಿದ್ದಾಳೆ. ತಾಯಿಯ ಸೆಲ್ಫೀ ಹುಚ್ಚಿನಿಂದಾಗಿ ಕೈನಲ್ಲಿ ಹಿಡಿದುಕೊಂಡಿದ್ದ ಎರಡು ವರ್ಷದ ಮಗು ಸಮುದ್ರಪಾಲಾದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಪೊಲೀಸರು ಮತ್ತು ಸ್ಥಳೀಯರ ಹುಡುಕಾಟದ ಬಳಿಕ ಮಗುವಿನ ಶವ ಎರಡು ದಿನಗಳ ನಂತರ ಆಲಪ್ಪುಳದ ಗೆಲಿಲಿಯೋ ಬೀಚ್ ನಲ್ಲಿ ಪತ್ತೆಯಾಗಿದೆ. ಮೃತ ಮಗುವಿನ ಹೆಸರು ಅಧಿಕೃಷ್ಣ ಎಂದು ದಿ ಹಿಂದು ಪತ್ರಿಕೆ ವರದಿ ಮಾಡಿದೆ. ತಟರಕ್ಷಣಾ ಪಡೆ ಮತ್ತು ಸ್ಥಳೀಯ ಮೀನುಗಾರರು ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ತನ್ನಿಬ್ಬರು ಮಕ್ಕಳು ಮತ್ತು ಸದರನ ಇನ್ನೊಂದು ಮಗುವಿನ ಜೊತೆ ಬೀಚ್ ನೋಡಲು ಬಂದಿದ್ದರು. ಸಮುದ್ರ ಅಬ್ಬರ ಹೆಚ್ಚಿದ್ದರಿಂದ ಅಲ್ಲಿನ ಸೆಕ್ಯುರಿಟಿ ಬೀಚ್ ಹೋಗದಂತೆ ತಡೆಯುತ್ತಿದ್ದ. ಆದರೆ ತಾಯಿ, ಮಕ್ಕಳು ಸೆಕ್ಯುರಿಟಿಯ ಕಣ್ಣು ತಪ್ಪಿಸಿ ಅಲ್ಲಿನ ಇಎಸ್ಐ ಆಸ್ಪತ್ರೆಯ ಎಡೆಯಿಂದ ನುಸುಳಿಕೊಂಡು ಬೀಚ್ ನತ್ತ ಬಂದಿದ್ದರು. ಬೀಚ್ ನಲ್ಲಿ ಮಕ್ಕಳ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಬೃಹತ್ ಅಲೆಯೊಂದು ಎದ್ದು ಬಂದಿದ್ದು ತಾಯಿ, ಮಕ್ಕಳು ಬ್ಯಾಲೆನ್ಸ್ ತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ದೂರದಲ್ಲಿ ನಿಂತಿದ್ದ ಸಂಬಂಧಿಕನೊಬ್ಬ ಓಡಿ ಬಂದು ಮಹಿಳೆ ಮತ್ತು ಆರು ಮತ್ತು ಏಳು ವರ್ಷದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಮಗು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಒಂದು ಕ್ಷಣದ ಮೈಮರೆವು ಮಗುವನ್ನು ಬಲಿ ತೆಗೆದುಕೊಂಡಿತ್ತು.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm