ಹೊಳೆಗೆ ಬಿದ್ದು ಯುವಕ ಮೃತ್ಯು

16-09-20 11:20 am       Udupi Correspondent   ಕ್ರೈಂ

ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಕಾಲು ಜಾರಿ ಸುಮನಾವತಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪುಂದ ಬಳಿ ನಡೆದಿದೆ. ಮೃತ ಯುವಕನನ್ನು ಶಿವರಾಜ್ (27) ಎಂದು ಗುರುತಿಸಲಾಗಿದೆ.

ಬೈಂದೂರು, ಸೆ. 16: ಮಳೆ ಗಾಳಿಯ ನಡುವೆ ನದಿ ಬದಿಯಿಂದ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಕಾಲು ಜಾರಿ ಸುಮನಾವತಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪುಂದ ಬಳಿ ನಡೆದಿದೆ. ಮೃತ ಯುವಕನನ್ನು ಶಿವರಾಜ್ (27) ಎಂದು ಗುರುತಿಸಲಾಗಿದೆ.

ಶಿವರಾಜ ಅವರು ಸೆ.13 ರಂದು ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದು ಮನೆಗೆ ಬಂದಿರಲಿಲ್ಲ. ಸೆ.15 ರಂದು ಸುಮನಾವತಿ ನದಿಯ ಉಪ್ಪುಂದ ಬ್ರಿಡ್ಜ್ ಬಳಿ ನದಿಯಲ್ಲಿ ಮೃತದೇಹ ದೊರೆತಿದೆ. 

ಸುಮನಾವತಿ ನದಿ ದಡದಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿಪರೀತ ಗಾಳಿ - ಮಳೆಯಿಂದಾಗಿ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿರಬೇಕೆಂದು ಹೇಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join our WhatsApp group for latest news updates