ಬ್ರೇಕಿಂಗ್ ನ್ಯೂಸ್
04-01-22 11:45 am HK Desk news ಕ್ರೈಂ
ಮುಂಬೈ, ಜ.4 : ಮುಸ್ಲಿಮ್ ಮಹಿಳೆಯರನ್ನು ಹರಾಜಿಗಿಟ್ಟ ಬುಲ್ಲಿ ಬಾಯ್ ಏಪ್ ಪ್ರಕರಣದಲ್ಲಿ ಮುಂಬೈ ಸೈಬರ್ ಪೊಲೀಸರು ಶಂಕಿತ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬುಲ್ಲಿ ಬಾಯ್ ಏಪ್ ಫಾಲೋ ಮಾಡುತ್ತಿದ್ದ ಐವರಲ್ಲಿ ಈತನೂ ಒಬ್ಬನಾಗಿದ್ದು, ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಮುಂಬೈಗೆ ಒಯ್ದಿದ್ದಾರೆ.
ನಾಲ್ಕು ದಿನಗಳ ಹಿಂದೆ ದೆಹಲಿಯಲ್ಲಿ ಬುಲ್ಲಿ ಬಾಯ್ ಏಪ್ ಪ್ರಕರಣ ಮೊದಲು ಬೆಳಕಿಗೆ ಬಂದಿತ್ತು. ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಿಂದ ಕದ್ದು ಅದನ್ನು ಬುಲ್ಲಿ ಬಾಯ್ ಏಪ್ ನಲ್ಲಿ ಅಪ್ಲೋಡ್ ಮಾಡಿ ಹರಾಜಿಗಿಡಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದೇಶಾದ್ಯಂತ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ದೆಹಲಿ ಮತ್ತು ಮುಂಬೈ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ತನಿಖೆ ಕೈಗೆತ್ತಿಕೊಂಡಿದ್ದರು.
ಈ ಬಗ್ಗೆ ದೆಹಲಿ ಪೊಲೀಸರು ಗಿಟ್ ಹಬ್ ಡೆವಲಪರ್ ಮತ್ತು ಟ್ವಿಟರ್ ಇಂಡಿಯಾ ಬಳಿಯಿಂದ ಮಾಹಿತಿ ಕೇಳಿತ್ತು. ಗಿಟ್ ಹಬ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬುಲ್ಲಿ ಬಾಯ್ ಏಪ್ ಅನ್ನು ವಿಷಯ ತಿಳಿಯುತ್ತಲೇ ಬ್ಲಾಕ್ ಮಾಡಲಾಗಿದೆ. ಅಲ್ಲದೆ ಹಿಂಸೆಯನ್ನು ಪ್ರಚೋದಿಸುವ, ಕಿರುಕುಳ, ತಾರತಮ್ಯ ಹರಡುವ ರೀತಿ ಯಾವುದೇ ಕಂಟೆಂಟ್ ಇರದಂತೆ ಕಂಪನಿಯಿಂದ ಪ್ರತ್ಯೇಕ ನೀತಿಯನ್ನು ಹೊಂದಲಾಗಿದೆ ಎಂದು ಹೇಳಿದೆ.
ಸೋಶಿಯಲ್ ಮೀಡಿಯಾ ಸಾಫ್ಟ್ ವೇರ್ ಡೆವಲಪರ್ ಸಂಸ್ಥೆಯಾಗಿರುವ ಗಿಟ್ ಹಬ್, ಭಾರತೀಯ ಕಾನೂನಿನಡಿ ಪ್ರಕರಣದಲ್ಲಿ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದೆ. ಇದೇ ವೇಳೆ, ಬುಲ್ಲಿ ಬಾಯ್ ಏಪ್ ಬಗ್ಗೆ ಮೊದಲು ಟ್ವೀಟ್ ಮಾಡಿರುವವರು, ಫಾಲೋ ಮಾಡುತ್ತಿರುವವರ ಬಗ್ಗೆ ಟ್ವಿಟರ್ ಸಂಸ್ಥೆಯಿಂದ ಮಾಹಿತಿ ಕೇಳಿದೆ.
ಮುಸ್ಲಿಂ ಮಹಿಳೆಯರ ಹರಾಜು ; ಬುಲ್ಲಿ ಬಾಯ್ ಬಗ್ಗೆ ಟ್ವಿಟರ್ ಬಳಿ ಮಾಹಿತಿ ಕೇಳಿದ ದೆಹಲಿ ಪೊಲೀಸರು
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
Mumbai police detained a suspect accused in Bulli Bai app case from Bengaluru. He is being taken to Mumbai. He is one of the five followers of Bulli Bai. He is likely to be arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm