ಬ್ರೇಕಿಂಗ್ ನ್ಯೂಸ್
04-01-22 12:45 pm HK Desk news ಕ್ರೈಂ
ಥಾಣೆ, ಜ.3 : ಮನೆಯಲ್ಲಿ 50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಸಾಯುವ ಮಟ್ಟಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ತಂದೆಯನ್ನು ಕಲ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್(10) ತಂದೆಯ ಹೊಡೆತಕ್ಕೆ ಸಾವನ್ನಪ್ಪಿರುವ ಬಾಲಕ. ಬಬ್ಲು ಓಮ್ಪ್ರಕಾಶ್ ಪ್ರಜಾಪತಿ(41) ಕೊಲೆ ಮಾಡಿರುವ ಆರೋಪಿ.
ಕಲ್ವಾ ಠಾಣೆಯ ವ್ಯಾಪ್ತಿ ಥಕುರ್ಪದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಡಿ.29ರಂದು ರಾತ್ರಿ ಕಿರಣ್ನನ್ನು ತಂದೆ ಥಳಿಸಿದಾಗ ಆತನ ಏಟಿಗೆ ಮಗ ರಾತ್ರಿಯೆಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಜೈ ಮಾ ಸಂತೋಷಿ ಚಾವಲ್ನ ಗೈಯ್ಕರ್ ಮೈದಾನ್ನಲ್ಲಿ ಬ್ಲಾಂಕೆಟ್ನಿಂದ ಸುತ್ತಿದ್ದ ಹಲವು ಗಾಯಗಳ ಗುರುತುಗಳಿದ್ದ ಬಾಲಕನನ್ನು ಕಂಡ ದಾರಿಹೋಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಕಾಲ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೂಡಲೇ ಆತನನ್ನು ಚತ್ರಪತಿ ಶಿವಾಜಿ ಮಹಾರಾಜ್ ಹಾಸ್ಪಟೆಲ್ಗೆ ಕರೆದೊಯ್ದಾಗ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಬಾಲಕನ ಭುಜ ಮತ್ತು ಕಾಲಿಗೆ ಮುರಿತವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ಕೈಗೊಂಡ ಪೊಲೀಸರು ನೆರೆಹೊರೆಯವರನ್ನು ವಿಚಾರಿಸಿದಾಗ ಬಾಲಕನ ವಿವರಗಳು ಪತ್ತೆಯಾಗಿವೆ. ಬಳಿಕ ಮೃತ ಬಾಲಕನ ಸಹೋದರಿಯಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.
ಮಗನನ್ನು ಕೊಂದು ಪರಾರಿಯಾಗಿದ್ದ ತಂದೆ ಓಂಪ್ರಕಾಶ್ ಬಳಿಕ ತನ್ನ ಏರಿಯಾದಲ್ಲಿ ತಿರುಗಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Kalwa police arrested a 38-year-old man on Thursday for beating his 10-year-old son to death for stealing ₹50 from his wallet. The father beat him up with different objects on Wednesday night and the boy fell unconscious. The father later wrapped him in a blanket and left him unattended till the next day.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm