ಬ್ರೇಕಿಂಗ್ ನ್ಯೂಸ್
04-01-22 12:45 pm HK Desk news ಕ್ರೈಂ
ಥಾಣೆ, ಜ.3 : ಮನೆಯಲ್ಲಿ 50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಸಾಯುವ ಮಟ್ಟಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ತಂದೆಯನ್ನು ಕಲ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್(10) ತಂದೆಯ ಹೊಡೆತಕ್ಕೆ ಸಾವನ್ನಪ್ಪಿರುವ ಬಾಲಕ. ಬಬ್ಲು ಓಮ್ಪ್ರಕಾಶ್ ಪ್ರಜಾಪತಿ(41) ಕೊಲೆ ಮಾಡಿರುವ ಆರೋಪಿ.
ಕಲ್ವಾ ಠಾಣೆಯ ವ್ಯಾಪ್ತಿ ಥಕುರ್ಪದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಡಿ.29ರಂದು ರಾತ್ರಿ ಕಿರಣ್ನನ್ನು ತಂದೆ ಥಳಿಸಿದಾಗ ಆತನ ಏಟಿಗೆ ಮಗ ರಾತ್ರಿಯೆಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಜೈ ಮಾ ಸಂತೋಷಿ ಚಾವಲ್ನ ಗೈಯ್ಕರ್ ಮೈದಾನ್ನಲ್ಲಿ ಬ್ಲಾಂಕೆಟ್ನಿಂದ ಸುತ್ತಿದ್ದ ಹಲವು ಗಾಯಗಳ ಗುರುತುಗಳಿದ್ದ ಬಾಲಕನನ್ನು ಕಂಡ ದಾರಿಹೋಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಕಾಲ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೂಡಲೇ ಆತನನ್ನು ಚತ್ರಪತಿ ಶಿವಾಜಿ ಮಹಾರಾಜ್ ಹಾಸ್ಪಟೆಲ್ಗೆ ಕರೆದೊಯ್ದಾಗ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಬಾಲಕನ ಭುಜ ಮತ್ತು ಕಾಲಿಗೆ ಮುರಿತವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ಕೈಗೊಂಡ ಪೊಲೀಸರು ನೆರೆಹೊರೆಯವರನ್ನು ವಿಚಾರಿಸಿದಾಗ ಬಾಲಕನ ವಿವರಗಳು ಪತ್ತೆಯಾಗಿವೆ. ಬಳಿಕ ಮೃತ ಬಾಲಕನ ಸಹೋದರಿಯಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.
ಮಗನನ್ನು ಕೊಂದು ಪರಾರಿಯಾಗಿದ್ದ ತಂದೆ ಓಂಪ್ರಕಾಶ್ ಬಳಿಕ ತನ್ನ ಏರಿಯಾದಲ್ಲಿ ತಿರುಗಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Kalwa police arrested a 38-year-old man on Thursday for beating his 10-year-old son to death for stealing ₹50 from his wallet. The father beat him up with different objects on Wednesday night and the boy fell unconscious. The father later wrapped him in a blanket and left him unattended till the next day.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm