ಬ್ರೇಕಿಂಗ್ ನ್ಯೂಸ್
04-01-22 09:44 pm HK Desk news ಕ್ರೈಂ
ಮುಂಬೈ, ಜ.4 : ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಹರಾಜಿಗಿಟ್ಟ ಪ್ರಕರಣದಲ್ಲಿ ಮುಂಬೈ ಸೈಬರ್ ಪೊಲೀಸರು ಉತ್ತರಾಖಂಡದಲ್ಲಿ ಪ್ರಮುಖ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ 21 ವರ್ಷದ ವಿಶಾಲ್ ಕುಮಾರ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿ ಮುಂಬೈಗೆ ಒಯ್ದಿದ್ದರು. ಮುಂಬೈನಲ್ಲಿ ಕೋರ್ಟಿಗೆ ಹಾಜರುಪಡಿಸಿ ಜ.10ರ ವರೆಗೆ ಪೊಲೀಸ್ ಕಸ್ಟಡಿ ಪಡೆದಿದ್ದಾರೆ. ಆತನ ಮಾಹಿತಿಯಂತೆ, ಉತ್ತರಾಖಂಡದಲ್ಲಿ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
ಮಹಿಳೆ ಮತ್ತು ಯುವಕ ಫೇಸ್ಬುಕ್, ಇನ್ ಸ್ಟಾಗ್ರಾಮಿನಲ್ಲಿ ಗೆಳೆಯರಾಗಿದ್ದು ಸಮಾನ ಉದ್ದೇಶದಿಂದ ಸೋಶಿಯಲ್ ಮೀಡಿಯಾದಿಂದ ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ತೆಗೆದು ಏಪ್ ಕ್ರಿಯೇಟ್ ಮಾಡಿದ್ದರು. ಗಿಟ್ ಹಬ್ ಅನ್ನುವ ಪ್ಲಾಟ್ ಫಾರಂನಲ್ಲಿ ಬುಲ್ಲಿ ಬಾಯ್ಸ್ ಹೆಸರಲ್ಲಿ ಏಪ್ ಸೃಷ್ಟಿಸಿ ನೂರಕ್ಕೂ ಹೆಚ್ಚು ಮಹಿಳೆಯರ ಫೋಟೋಗಳನ್ನು ಅಪ್ಲೋಡ್ ಮಾಡಿ, ಸಾರ್ವಜನಿಕ ಹರಾಜಿಗೆ ಹಾಕಿದ್ದರು. ಜನವರಿ 1ರಂದು ಈ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಭಾರೀ ಆಕ್ರೋಶ ಕೇಳಿಬಂದಿತ್ತು.
ಬುಲ್ಲಿ ಬಾಯ್ ಪ್ರಕರಣವನ್ನು ದೆಹಲಿ ಪೊಲೀಸರು ಸೈಬರ್ ಸೆಲ್ ಸ್ಪೆಷಲ್ ಯೂನಿಟ್ ವಿಭಾಗಕ್ಕೆ ಹಸ್ತಾಂತರ ಮಾಡಿದ್ದಾರೆ. ಉತ್ತರಾಖಂಡದಲ್ಲಿ ವಶಕ್ಕೆ ಪಡೆದಿರುವ ಮಹಿಳೆಯನ್ನು ಅಲ್ಲಿನ ಕೋರ್ಟಿನಲ್ಲಿ ಹಾಜರು ಪಡಿಸಿ ಟ್ರಾನ್ಸಿಟ್ ವಾರಂಟ್ ಪಡೆದು ಮುಂಬೈಗೆ ಕರೆತರಲಿದ್ದಾರೆ. ಇದೇ ವೇಳೆ, ಮುಂಬೈ ಪೊಲೀಸರು ವಿಶಾಲ್ ಕುಮಾರ್ ಇದ್ದ ಬೆಂಗಳೂರಿನ ಮನೆಯನ್ನು ಸರ್ಚ್ ಮಾಡಲು ವಾರಂಟ್ ಪಡೆದಿದ್ದಾರೆ.
ಕೃತ್ಯದಲ್ಲಿ ಇವರಿಬ್ಬರೇ ಭಾಗಿಯಾಗಿದ್ದೇ ಇನ್ನೂ ಹಲವರಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಇವರ ಪಾತ್ರ ಕಂಡುಬಂದಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮುಸ್ಲಿಮ್ ಮಹಿಳೆಯರ ಹರಾಜು ಪ್ರಕರಣ ; ಬೆಂಗಳೂರಿನಲ್ಲಿ ಶಂಕಿತ ಆರೋಪಿ ವಶಕ್ಕೆ
ಮುಸ್ಲಿಂ ಮಹಿಳೆಯರ ಹರಾಜು ; ಬುಲ್ಲಿ ಬಾಯ್ ಬಗ್ಗೆ ಟ್ವಿಟರ್ ಬಳಿ ಮಾಹಿತಿ ಕೇಳಿದ ದೆಹಲಿ ಪೊಲೀಸರು
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
A woman has been detained from Uttarakhand by the Mumbai Police in connection with the 'Bulli Bai' controversy. The Mumbai Police has detained a woman, the main accused in the 'Bulli Bai' case -- in which photos of Muslim women were uploaded on an app for 'auction', from Uttarakhand. The woman is being brought to Mumbai for investigation.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am