ಬ್ರೇಕಿಂಗ್ ನ್ಯೂಸ್
09-01-22 02:30 pm Hk Desk, Bengaluru ಕ್ರೈಂ
ಬೆಂಗಳೂರು, ಜ.9: ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಬ್ಲ್ಯಾಕ್ ಮೇಲ್ ನಡೆಸಿರುವ ಪ್ರಕರಣ ಸಂಬಂಧಿಸಿ ದಕ್ಷಿಣ ಕನ್ನಡ ಮೂಲದ ಖ್ಯಾತ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಪುತ್ರ ರಾಹುಲ್ ಭಟ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ನಿಶಾಂತ್ ಮೊಬೈಲ್ ನಂಬರಿಗೆ ಅಪರಿಚಿತರು ವಿಡಿಯೋ ಕಳುಹಿಸಿದ್ದು, ಅದರಲ್ಲಿ ಯುವತಿಯ ಜೊತೆ ನಿಶಾಂತ್ ಇರುವ ರೀತಿ ಬಿಂಬಿಸಲಾಗಿತ್ತು. ವಿಡಿಯೋವನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡಿದ್ದು, ಒಂದು ಕೋಟಿ ನೀಡುವಂತೆ ಅಪರಿಚಿತರು ಬೇಡಿಕೆ ಇರಿಸಿದ್ದರು. ಹಣ ನೀಡದೇ ಇದ್ದರೆ ಟಿವಿ ಮಾಧ್ಯಮಕ್ಕೆ ನೀಡುವುದಾಗಿ ಬೆದರಿಕೆ ಒಡ್ಡಿದ್ದರು. ಈ ಬಗ್ಗೆ ತಂದೆಯ ಸೂಚನೆಯಂತೆ ಡಿ.26ರಂದು ನಿಶಾಂತ್ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಚಂದ್ರಶೇಖರ ಸ್ವಾಮೀಜಿಯ ಪುತ್ರ ರಾಹುಲ್ ಭಟ್ ನನ್ನು ಬಂಧಿಸಿದ್ದಾರೆ. ಇದೇ ವೇಳೆ, ಗೋವಾದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಈ ಹಿಂದೆ ಸಚಿವರೊಬ್ಬರ ಪಿಎ ಆಗಿದ್ದ ವ್ಯಕ್ತಿ ಎನ್ನುವ ಮಾಹಿತಿಯಿದೆ. ಅಲ್ಲದೆ, ಈ ಜಾಲದಲ್ಲಿ ಶಾಸಕರೊಬ್ಬರ ಪುತ್ರಿ ಇದ್ದಾಳೆ ಎನ್ನುವ ಆರೋಪವೂ ಇದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಜಯಪುರದ ಶಾಸಕರೊಬ್ಬರ ಪುತ್ರಿಯ ಮೊಬೈಲ್ ನಂಬರಿನಿಂದ ವಾಟ್ಸಪ್ ವಿಡಿಯೋ ನಿಶಾಂತ್ ನಂಬರಿಗೆ ಬಂದಿತ್ತು. ಆದರೆ, ಆಕೆಯನ್ನು ವಿಚಾರಿಸಿದಾಗ ಮೊಬೈಲ್ ಸಿಮ್ ಅನ್ನು ಮಹಾರಾಷ್ಟ್ರದ ಸ್ನೇಹಿತನೊಬ್ಬ ಬಳಸುತ್ತಿದ್ದ ವಿಚಾರ ಗೊತ್ತಾಗಿತ್ತು.
ಸಚಿವ ಸೋಮಶೇಖರ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿಯ ಗಮನಕ್ಕೂ ತಂದಿದ್ದರು. ಹೀಗಾಗಿ ಸಿಎಂ ಬೊಮ್ಮಾಯಿ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ತನಿಖೆಗೆ ಸೂಚನೆ ನೀಡಿದ್ದರು. ಅದರಂತೆ ನಂಬರ್ ಟ್ರೇಸ್ ಮಾಡಿ, ಸದ್ಯಕ್ಕೆ ಇಬ್ಬರನ್ನು ಬಂಧಿಸಲಾಗಿದೆ. ಅದರಲ್ಲಿ ರಾಹುಲ್ ಭಟ್ ಒಬ್ಬ. ರಾಹುಲ್ ಭಟ್ ನನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಕೋರ್ಟಿಗೆ ಹಾಜರು ಪಡಿಸಿದ್ದು, ಐದು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಇದಲ್ಲದೆ, ವಿಡಿಯೋ ವಿಚಾರದಲ್ಲಿ ಪೊಲೀಸರು ಸೈಬರ್ ತಂತ್ರಜ್ಞರ ಮೂಲಕ ತನಿಖೆ ನಡೆಸುತ್ತಿದ್ದಾರೆ.
Minister Somashekhar son blackmailed of Nude Video with Girl which was edited and sent to this WhatsApp number and blackmailed of crores. Based on the Police Complaint the gang was traced and the person leading the gang was the son of Shri Chandrashekar Swamiji Rahul Bhat.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm