ಬ್ರೇಕಿಂಗ್ ನ್ಯೂಸ್
09-01-22 02:30 pm Hk Desk, Bengaluru ಕ್ರೈಂ
ಬೆಂಗಳೂರು, ಜ.9: ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಬ್ಲ್ಯಾಕ್ ಮೇಲ್ ನಡೆಸಿರುವ ಪ್ರಕರಣ ಸಂಬಂಧಿಸಿ ದಕ್ಷಿಣ ಕನ್ನಡ ಮೂಲದ ಖ್ಯಾತ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಪುತ್ರ ರಾಹುಲ್ ಭಟ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ನಿಶಾಂತ್ ಮೊಬೈಲ್ ನಂಬರಿಗೆ ಅಪರಿಚಿತರು ವಿಡಿಯೋ ಕಳುಹಿಸಿದ್ದು, ಅದರಲ್ಲಿ ಯುವತಿಯ ಜೊತೆ ನಿಶಾಂತ್ ಇರುವ ರೀತಿ ಬಿಂಬಿಸಲಾಗಿತ್ತು. ವಿಡಿಯೋವನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡಿದ್ದು, ಒಂದು ಕೋಟಿ ನೀಡುವಂತೆ ಅಪರಿಚಿತರು ಬೇಡಿಕೆ ಇರಿಸಿದ್ದರು. ಹಣ ನೀಡದೇ ಇದ್ದರೆ ಟಿವಿ ಮಾಧ್ಯಮಕ್ಕೆ ನೀಡುವುದಾಗಿ ಬೆದರಿಕೆ ಒಡ್ಡಿದ್ದರು. ಈ ಬಗ್ಗೆ ತಂದೆಯ ಸೂಚನೆಯಂತೆ ಡಿ.26ರಂದು ನಿಶಾಂತ್ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.


ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಚಂದ್ರಶೇಖರ ಸ್ವಾಮೀಜಿಯ ಪುತ್ರ ರಾಹುಲ್ ಭಟ್ ನನ್ನು ಬಂಧಿಸಿದ್ದಾರೆ. ಇದೇ ವೇಳೆ, ಗೋವಾದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಈ ಹಿಂದೆ ಸಚಿವರೊಬ್ಬರ ಪಿಎ ಆಗಿದ್ದ ವ್ಯಕ್ತಿ ಎನ್ನುವ ಮಾಹಿತಿಯಿದೆ. ಅಲ್ಲದೆ, ಈ ಜಾಲದಲ್ಲಿ ಶಾಸಕರೊಬ್ಬರ ಪುತ್ರಿ ಇದ್ದಾಳೆ ಎನ್ನುವ ಆರೋಪವೂ ಇದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಜಯಪುರದ ಶಾಸಕರೊಬ್ಬರ ಪುತ್ರಿಯ ಮೊಬೈಲ್ ನಂಬರಿನಿಂದ ವಾಟ್ಸಪ್ ವಿಡಿಯೋ ನಿಶಾಂತ್ ನಂಬರಿಗೆ ಬಂದಿತ್ತು. ಆದರೆ, ಆಕೆಯನ್ನು ವಿಚಾರಿಸಿದಾಗ ಮೊಬೈಲ್ ಸಿಮ್ ಅನ್ನು ಮಹಾರಾಷ್ಟ್ರದ ಸ್ನೇಹಿತನೊಬ್ಬ ಬಳಸುತ್ತಿದ್ದ ವಿಚಾರ ಗೊತ್ತಾಗಿತ್ತು.
ಸಚಿವ ಸೋಮಶೇಖರ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿಯ ಗಮನಕ್ಕೂ ತಂದಿದ್ದರು. ಹೀಗಾಗಿ ಸಿಎಂ ಬೊಮ್ಮಾಯಿ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ತನಿಖೆಗೆ ಸೂಚನೆ ನೀಡಿದ್ದರು. ಅದರಂತೆ ನಂಬರ್ ಟ್ರೇಸ್ ಮಾಡಿ, ಸದ್ಯಕ್ಕೆ ಇಬ್ಬರನ್ನು ಬಂಧಿಸಲಾಗಿದೆ. ಅದರಲ್ಲಿ ರಾಹುಲ್ ಭಟ್ ಒಬ್ಬ. ರಾಹುಲ್ ಭಟ್ ನನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಕೋರ್ಟಿಗೆ ಹಾಜರು ಪಡಿಸಿದ್ದು, ಐದು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಇದಲ್ಲದೆ, ವಿಡಿಯೋ ವಿಚಾರದಲ್ಲಿ ಪೊಲೀಸರು ಸೈಬರ್ ತಂತ್ರಜ್ಞರ ಮೂಲಕ ತನಿಖೆ ನಡೆಸುತ್ತಿದ್ದಾರೆ.
Minister Somashekhar son blackmailed of Nude Video with Girl which was edited and sent to this WhatsApp number and blackmailed of crores. Based on the Police Complaint the gang was traced and the person leading the gang was the son of Shri Chandrashekar Swamiji Rahul Bhat.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm