ಬ್ರೇಕಿಂಗ್ ನ್ಯೂಸ್
09-01-22 02:30 pm Hk Desk, Bengaluru ಕ್ರೈಂ
ಬೆಂಗಳೂರು, ಜ.9: ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಬ್ಲ್ಯಾಕ್ ಮೇಲ್ ನಡೆಸಿರುವ ಪ್ರಕರಣ ಸಂಬಂಧಿಸಿ ದಕ್ಷಿಣ ಕನ್ನಡ ಮೂಲದ ಖ್ಯಾತ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಪುತ್ರ ರಾಹುಲ್ ಭಟ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ನಿಶಾಂತ್ ಮೊಬೈಲ್ ನಂಬರಿಗೆ ಅಪರಿಚಿತರು ವಿಡಿಯೋ ಕಳುಹಿಸಿದ್ದು, ಅದರಲ್ಲಿ ಯುವತಿಯ ಜೊತೆ ನಿಶಾಂತ್ ಇರುವ ರೀತಿ ಬಿಂಬಿಸಲಾಗಿತ್ತು. ವಿಡಿಯೋವನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡಿದ್ದು, ಒಂದು ಕೋಟಿ ನೀಡುವಂತೆ ಅಪರಿಚಿತರು ಬೇಡಿಕೆ ಇರಿಸಿದ್ದರು. ಹಣ ನೀಡದೇ ಇದ್ದರೆ ಟಿವಿ ಮಾಧ್ಯಮಕ್ಕೆ ನೀಡುವುದಾಗಿ ಬೆದರಿಕೆ ಒಡ್ಡಿದ್ದರು. ಈ ಬಗ್ಗೆ ತಂದೆಯ ಸೂಚನೆಯಂತೆ ಡಿ.26ರಂದು ನಿಶಾಂತ್ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.


ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಚಂದ್ರಶೇಖರ ಸ್ವಾಮೀಜಿಯ ಪುತ್ರ ರಾಹುಲ್ ಭಟ್ ನನ್ನು ಬಂಧಿಸಿದ್ದಾರೆ. ಇದೇ ವೇಳೆ, ಗೋವಾದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಈ ಹಿಂದೆ ಸಚಿವರೊಬ್ಬರ ಪಿಎ ಆಗಿದ್ದ ವ್ಯಕ್ತಿ ಎನ್ನುವ ಮಾಹಿತಿಯಿದೆ. ಅಲ್ಲದೆ, ಈ ಜಾಲದಲ್ಲಿ ಶಾಸಕರೊಬ್ಬರ ಪುತ್ರಿ ಇದ್ದಾಳೆ ಎನ್ನುವ ಆರೋಪವೂ ಇದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಜಯಪುರದ ಶಾಸಕರೊಬ್ಬರ ಪುತ್ರಿಯ ಮೊಬೈಲ್ ನಂಬರಿನಿಂದ ವಾಟ್ಸಪ್ ವಿಡಿಯೋ ನಿಶಾಂತ್ ನಂಬರಿಗೆ ಬಂದಿತ್ತು. ಆದರೆ, ಆಕೆಯನ್ನು ವಿಚಾರಿಸಿದಾಗ ಮೊಬೈಲ್ ಸಿಮ್ ಅನ್ನು ಮಹಾರಾಷ್ಟ್ರದ ಸ್ನೇಹಿತನೊಬ್ಬ ಬಳಸುತ್ತಿದ್ದ ವಿಚಾರ ಗೊತ್ತಾಗಿತ್ತು.
ಸಚಿವ ಸೋಮಶೇಖರ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿಯ ಗಮನಕ್ಕೂ ತಂದಿದ್ದರು. ಹೀಗಾಗಿ ಸಿಎಂ ಬೊಮ್ಮಾಯಿ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ತನಿಖೆಗೆ ಸೂಚನೆ ನೀಡಿದ್ದರು. ಅದರಂತೆ ನಂಬರ್ ಟ್ರೇಸ್ ಮಾಡಿ, ಸದ್ಯಕ್ಕೆ ಇಬ್ಬರನ್ನು ಬಂಧಿಸಲಾಗಿದೆ. ಅದರಲ್ಲಿ ರಾಹುಲ್ ಭಟ್ ಒಬ್ಬ. ರಾಹುಲ್ ಭಟ್ ನನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಕೋರ್ಟಿಗೆ ಹಾಜರು ಪಡಿಸಿದ್ದು, ಐದು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಇದಲ್ಲದೆ, ವಿಡಿಯೋ ವಿಚಾರದಲ್ಲಿ ಪೊಲೀಸರು ಸೈಬರ್ ತಂತ್ರಜ್ಞರ ಮೂಲಕ ತನಿಖೆ ನಡೆಸುತ್ತಿದ್ದಾರೆ.
Minister Somashekhar son blackmailed of Nude Video with Girl which was edited and sent to this WhatsApp number and blackmailed of crores. Based on the Police Complaint the gang was traced and the person leading the gang was the son of Shri Chandrashekar Swamiji Rahul Bhat.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm