ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.

ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am