ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.

ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm