ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.

ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm