ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.
ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 02:20 pm
Mangalore Correspondent
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm