ಬ್ರೇಕಿಂಗ್ ನ್ಯೂಸ್
13-01-22 08:02 pm HK Desk news ಕ್ರೈಂ
ಬೆಳ್ತಂಗಡಿ, ಜ.13 : ಜಮೀನು ವಿಚಾರದಲ್ಲಿ ತಕರಾರು ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು ನೆರೆಮನೆಯ ವ್ಯಕ್ತಿಯೊಬ್ಬ ಯುವಕನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ಧರ್ಮಸ್ಥಳ ಠಾಣೆ ವ್ಯಾಪ್ತಿಯ ರೆಖ್ಯ ಗ್ರಾಮದ ದೇವಸ ಎಂಬಲ್ಲಿ ನಡೆದಿದೆ.
ರೆಖ್ಯ ಗ್ರಾಮದ ನಿವಾಸಿ ಸಾಂತಪ್ಪ ಗೌಡ (42) ಮೃತ ವ್ಯಕ್ತಿ. ಸಾಂತಪ್ಪ ಗೌಡ ಎಲ್ಲೈಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದಾಗ ಮನೆ ಬಳಿಯ ಮಣ್ಣಿನ ರಸ್ತೆ ಬದಿಯಲ್ಲಿ ನೆರೆಮನೆಯ ಜಯಚಂದ್ರ ಮತ್ತು ಇತರ ಕೆಲಸದಾಳುಗಳು ಕೆಲಸ ಮಾಡುತ್ತಿದ್ದರು.

ರಸ್ತೆಯ ಇಕ್ಕೆಲಗಳನ್ನು ಸವರಿ ಸರಿಪಡಿಸುತ್ತಿದ್ದಾಗ ಅದನ್ನು ನೋಡಿದ ಸಾಂತಪ್ಪ ಗೌಡ ಆಕ್ಷೇಪಿಸಿದ್ದಾರೆ. ರಸ್ತೆಯ ಭಾಗದಲ್ಲಿ ಹುಲ್ಲು ಸವರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದು, ಇದೇ ವಿಚಾರದಲ್ಲಿ ಜಯಚಂದ್ರ ಮತ್ತು ಸಾಂತಪ್ಪ ಗೌಡರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ, ಜಯಚಂದ್ರ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಸಾಂತಪ್ಪ ಗೌಡನ ಕುತ್ತಿಗೆ ಮತ್ತು ತಲೆಗೆ ಕಡಿದಿದ್ದು ಆತ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಇದೇ ವೇಳೆ, ಸಾಂತಪ್ಪ ಗೌಡನ ಅಕ್ಕ ಮೀನಾಕ್ಷಿ ಮತ್ತು ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಜೋಸೆಫ್ ಓಡಿ ಬಂದಿದ್ದು, ಅಷ್ಟರಲ್ಲಿ ಜಯಚಂದ್ರ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಮೀನಾಕ್ಷಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Belthangady Murder LIC agent hacked to death by neighbour over land dispute. The deceased has been identified as Santappa Gowda.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm