ಬ್ರೇಕಿಂಗ್ ನ್ಯೂಸ್
14-01-22 11:14 pm HK Desk news ಕ್ರೈಂ
ಪುತ್ತೂರು, ಜ.14 : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಆರೋಪಿ ಕಡಬ ಪೊಲೀಸ್ ಪೇದೆಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ಪ್ರಕರಣದಲ್ಲಿ ಆರೋಪಿ ಕಡಬ ಪೊಲೀಸ್ ಪೇದೆ ಶಿವರಾಜ್ ನನ್ನು ಕಳೆದ ಸೆಪ್ಟೆಂಬರ್ 28 ರಂದು ಬಂಧಿಸಲಾಗಿತ್ತು. ಆಬಳಿಕ ಆರೋಪಿ ವಿರುದ್ದ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಾಗಿದ್ದು ಈ ವೇಳೆ ಆರೋಪಿ ಜೈಲಿನಲ್ಲಿ 100 ದಿನಗಳನ್ನು ಪೂರೈಸಿದ್ದಾನೆ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಗಾಗಿ ಪುತ್ತೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ. ಆದರೆ ಪ್ರಕರಣ ಗಂಭೀರವಾಗಿದ್ದನ್ನು ಪರಿಗಣಿಸಿ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಬಾಲಕಿ ತನ್ನ ಮೇಲೆ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ನೀಡಲು ಕಡಬ ಠಾಣೆಗೆ ಬಂದಿದ್ದಳು. ಇದರಿಂದ ಪರಿಚಯ ಆಗಿದ್ದ ಬಾಲಕಿಯನ್ನು ಆರೋಪಿ ಶಿವರಾಜ್ ಪುಸಲಾಯಿಸಿ, ಆಕೆಯ ಮನೆಗೆ ತೆರಳಲು ಆರಂಭಿಸಿದ್ದ. ಸಮನ್ಸ್ ನೀಡಲು ಬರುತ್ತಿರುವುದಾಗಿ ಹೇಳಿ ಬಾಲಕಿ ಜೊತೆಗೆ ಸಂಬಂಧ ಬೆಳೆಸಿದ್ದ. ಆನಂತರ ಮದುವೆಯಾಗುತ್ತೇನೆಂದು ಹೇಳಿ ಲೈಂಗಿಕ ಸಂಬಂಧ ಮಾಡಿಕೊಂಡಿದ್ದ. ಆಬಳಿಕ ಬಾಲಕಿ ಗರ್ಭ ಧರಿಸಿದ್ದು ಮನೆಯವರು ಸಂಶಯದಿಂದ ತಪಾಸಣೆ ನಡೆಸಿದಾಗ ಐದೂವರೆ ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಈ ಬಗ್ಗೆ ಬಾಲಕಿಯನ್ನು ಮದುವೆಯಾಗಲು ಮನೆಯವರು ಒತ್ತಾಯಿಸಿದ್ದಾರೆ. ಆದರೆ ಆರೋಪಿ ನಿರಾಕರಿಸಿದ್ದರಿಂದ ಆಕೆಯ ತಂದೆ ಕಡಬ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಿದ್ದರು.
ಇದೇ ವೇಳೆ, ಆರೋಪಿ ಶಿವರಾಜ್ ಬಾಲಕಿಯ ತಾಯಿಗೆ 35 ಸಾವಿರ ಹಣ ಕೊಟ್ಟು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಈ ವಿಷಯ ಮಾಧ್ಯಮದಲ್ಲಿ ಬರುತ್ತಿದ್ದಂತೆ ಆರೋಪಿ ಶಿವರಾಜ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಆಬಳಿಕ ಶಿವರಾಜ್ ನನ್ನು ಪೊಲೀಸ್ ಸೇವೆಯಿಂದ ವಜಾ ಮಾಡಲಾಗಿತ್ತು.
ಕಡಬ ಠಾಣೆಯಲ್ಲಿ ಆರೋಪಿ ವಿರುದ್ದ ಪ್ರಮುಖ ಸೆಕ್ಷನ್ ಹಾಕಲಾಗಿದ್ದು ಅಪರಾಧವನ್ನು ಎಸ್ಪಿ ಋಷಿಕುಮಾರ್ ಸೋನವಾಣೆ ಗಂಭೀರವಾಗಿ ಪರಿಗಣಿಸಿದ್ದರು. ಒಬ್ಬ ಪೊಲೀಸ್ ಅಧಿಕಾರಿಯಾಗಿ ದೂರುದಾರ ಯುವತಿಯ ಮುಗ್ಧತೆಯನ್ನು ದುರುಪಯೋಗ ಪಡಿಸಿ ಅತ್ಯಾಚಾರ ನಡೆಸಿದ್ದಕ್ಕಾಗಿ 376(2) ಅಡಿ ಮತ್ತು 506 ಎ ಹಾಗೂ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿತ್ತು.
The court has rejected the bail plea of a police constable who was arrested on charges of sexually exploiting a minor rape survivor. The Puttur Fifth District and Sessions Court gave the order on Thursday.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm